ಜೇಟ್ಲಿ ಟೀಕಿಸಿದ ರಾಹುಲ್’ಗೆ ಹಕ್ಕು ಚ್ಯುತಿ ಭೀತಿ

Published : Jan 07, 2018, 11:23 AM ISTUpdated : Apr 11, 2018, 01:09 PM IST
ಜೇಟ್ಲಿ ಟೀಕಿಸಿದ ರಾಹುಲ್’ಗೆ ಹಕ್ಕು ಚ್ಯುತಿ ಭೀತಿ

ಸಾರಾಂಶ

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ‘ಜೇಟ್-ಲೈ’ (ಸುಳ್ಳುಗಾರ) ಎಂದು ಬೈದು ಟ್ವೀಟ್ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೇಲ್ನೋಟಕ್ಕೆ ಹಕ್ಕುಚ್ಯುತಿ ಎಸಗಿರುವುದು ಸಾಬೀತಾಗಿದೆ ಎಂದು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅಭಿಪ್ರಾಯ ಪಟ್ಟಿದ್ದಾರೆ ಎಂದು ಮೂಲಗಳು ಶನಿವಾರ ಹೇಳಿವೆ.

ನವದೆಹಲಿ (ಜ.07): ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ‘ಜೇಟ್-ಲೈ’ (ಸುಳ್ಳುಗಾರ) ಎಂದು ಬೈದು ಟ್ವೀಟ್ ಮಾಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೇಲ್ನೋಟಕ್ಕೆ ಹಕ್ಕುಚ್ಯುತಿ ಎಸಗಿರುವುದು ಸಾಬೀತಾಗಿದೆ ಎಂದು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅಭಿಪ್ರಾಯ ಪಟ್ಟಿದ್ದಾರೆ ಎಂದು ಮೂಲಗಳು ಶನಿವಾರ ಹೇಳಿವೆ. ಈ ಹಿನ್ನೆಲೆಯಲ್ಲಿ ವೆಂಕಯ್ಯ ಅವರು ತಮ್ಮ ಮುಂದೆ ಸಲ್ಲಿಕೆಯಾಗಿದ್ದ ಹಕ್ಕುಚ್ಯುತಿ ನೋಟಿಸ್‌ಅನ್ನು ಮುಂದಿನ ಕ್ರಮಕ್ಕಾಗಿ ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಅವರಿಗೆ ರವಾನಿಸಿದ್ದಾರೆ.

ರಾಹುಲ್ ಗಾಂಧಿ ಅವರು ಕೆಳಮನೆ ಸದಸ್ಯರಾಗಿರುವ ಕಾರಣ ಮಹಾಜನ್ ಅವರಿಗೆ ನೋಟಿಸ್ ಅನ್ನು ರವಾನಿಸಿದ್ದಾರೆ. ‘ವಿಷಯದ ಬಗ್ಗೆ ಪರಿಶೀಲನೆ ನಡೆಸಿದಾಗ ಮೇಲ್ನೋಟಕ್ಕೆ ಹಕ್ಕುಚ್ಯುತಿ ಆಗಿದ್ದು ಕಂಡುಬರುತ್ತಿದೆ’ ಎಂದು ವೆಂಕಯ್ಯ ಅವರು ನೋಟಿಸ್ ಹಸ್ತಾಂತರಿಸುವಾಗ ಹೇಳಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆಗೆ ಮೂಲಗಳು ತಿಳಿಸಿವೆ.

ಈಗಾಗಲೇ ರಾಹುಲ್ ವಿರುದ್ಧದ ದೂರು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿ ಅಧ್ಯಕ್ಷರಾಗಿರುವ ಲೋಕಸಭೆಯ ನೈತಿಕ ಸಮಿತಿ ಮುಂದೆ ಇದೆ. ಬಿಜೆಪಿ ರಾಜ್ಯಸಭಾ ಸದಸ್ಯ ಭೂಪೇಂದ್ರ ಯಾದವ್ ಅವರು ಇತ್ತೀಚೆಗೆ ರಾಹುಲ್ ವಿರುದ್ಧ ನೋಟಿಸ್ ನೀಡಿ, ‘ರಾಹುಲ್ ಅವರು ಜೇಟ್ಲಿ ಅವರನ್ನು ತೆಗಳಿ ಹಕ್ಕುಚ್ಯುತಿ ಮಾಡಿದ್ದಾರೆ’ ಎಂದು ಹಕ್ಕುಚ್ಯುತಿ ಪ್ರಸ್ತಾವಕ್ಕೆ ಕೋರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯುಪಿಎಸ್‌ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
ಜಾಗತಿಕ ಶಾಂತಿ-ಸೌಹಾರ್ದತೆಗೆ ಧ್ಯಾನವೇ ಮಾರ್ಗ: ವಿಶ್ವಸಂಸ್ಥೆಯಲ್ಲಿ ರವಿಶಂಕರ್ ಗುರೂಜಿ ಸಂದೇಶ