
ನವದೆಹಲಿ (ಜು. 24): ಅಲ್ವರ್ ಘಟನೆ ಬಗ್ಗೆ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸರಣಿ ದಾಳಿ ನಡೆಸಿದೆ. ಅದರಲ್ಲೂ ಕೇಂದ್ರ ಸಚಿವ ಪೀಯೂಶ್ ಗೋಯಲ್ ರಾಹುಲ್ ಗಾಂಧಿ ಅವರನ್ನು
‘ದ್ವೇಷದ ವ್ಯಾಪಾರಿ’ ಎಂದು ಪ್ರತ್ಯಾರೋಪ ಮಾಡಿದ್ದಾರೆ.
‘ಪ್ರತಿ ಸಲ ಅಪರಾಧ ಘಟನೆಗಳು ಸಂಭವಿಸಿದಾಗಲೂ ಸಂಭ್ರಮದಿಂದ ಕುಣಿಯುವುದನ್ನು ಬಿಡಿ ರಾಹುಲ್ ಗಾಂಧಿ. ರಾಜ್ಯ ಸರ್ಕಾರಗಳು ಈ ಕುರಿತು ಕಠಿಣ ಕ್ರಮ ಜರುಗಿಸಿವೆ. ನೀವು ಮತಗಳಿಕೆಗಾಗಿ ಸಮಾಜ ವಿಭಜಿಸುತ್ತಿದ್ದೀರಿ. ಮೊಸಳೆ ಕಣ್ಣೀರು ಸುರಿಸುತ್ತಿದ್ದೀರಿ. ಸಾಕಿನ್ನು. ನೀವೊಬ್ಬ ದ್ವೇಷದ ವ್ಯಾಪಾರಿ’ ಎಂದು ಗೋಯಲ್ ಕಿಡಿಕಾರಿದ್ದಾರೆ.
ಸಚಿವೆ ಸ್ಮತಿ ಇರಾನಿ ಕೂಡಾ ರಾಹುಲ್'ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.