ಚೌಕಿದಾರ್ ಚೋರ್ ಹೇ: ಸುಪ್ರೀಂ ಮುಂದೆ ಕ್ಷಮೆ ಕೋರಿದ ರಾಹುಲ್!

Published : Apr 30, 2019, 05:46 PM ISTUpdated : Apr 30, 2019, 05:53 PM IST
ಚೌಕಿದಾರ್ ಚೋರ್ ಹೇ: ಸುಪ್ರೀಂ ಮುಂದೆ ಕ್ಷಮೆ ಕೋರಿದ ರಾಹುಲ್!

ಸಾರಾಂಶ

ಚೌಕಿದಾರ್ ಚೋರ್ ಹೇ ಹೇಳಿಕೆಗೆ ಸುಪ್ರೀಂಕೋರ್ಟ್ ತಳಕು| ಸುಪ್ರೀಂಕೋರ್ಟ್ ಮುಂದೆ ಕ್ಷಮೆ ಕೋರಿದ ರಾಹುಲ್ ಗಾಂಧಿ| ನ್ಯಾಯಾಂಗ ನಿಂದನೆ ಆರೋಪ ಎದುರಿಸಿದ್ದ ಕಾಂಗ್ರೆಸ್ ಅಧ್ಯಕ್ಷ| ಕ್ಷಮೆಯಾಚನೆಯ ಹೊಸ ಅಫಿಡವಿಟ್ ಸಲ್ಲಿಸಲು ಅವಕಾಶ| ಮೇ.6ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್|

ನವದೆಹಲಿ(ಏ.30):ರಫೆಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಆರೋಪ ಹೊತ್ತಿದ್ದ ರಾಹುಲ್ ಗಾಂಧಿ, ತಮ್ಮ ಹೇಳಿಕೆಗೆ ಸುಪ್ರೀಂಕೋರ್ಟ್ ನಲ್ಲಿ  ಕ್ಷಮೆಯಾಚಿಸಿದ್ದಾರೆ.ಚೌಕಿದಾರ್ ಚೋರ್ ಹೇ ಘೋಷಣೆಗೆ ಸುಪ್ರೀಂಕೋರ್ಟ್ ನ್ನು ತಳಕು ಹಾಕಿದ್ದಕ್ಕೆ ತಪ್ಪನ್ನು ಒಪ್ಪಿಕೊಳ್ಳುವಂತೆ ಸುಪ್ರೀಂಕೋರ್ಟ್ ರಾಹುಲ್ ಗಾಂಧಿ ಅವರಿಗೆ ಸೂಚಿಸಿತ್ತು.

"

ಈ ಹಿನ್ನೆಲೆಯಲ್ಲಿ ತಮ್ಮ ಹೇಳಿಕೆಗೆ ರಾಹುಲ್ ಗಾಂಧಿ ಕ್ಷಮೆ ಕೋರಿದ್ದು, ಈ ಕುರಿತು ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ. ಇನ್ನು ರಾಹುಲ್ ಗಾಂಧಿ ಅವರಿಗೆ ಹೊಸ ಅಫಿಡವಿಟ್ ಸಲ್ಲಿಸುವುದಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂಕೋರ್ಟ್ ವಿಚಾರಣೆಯನ್ನು ಮೇ.6 ಕ್ಕೆ ಮುಂದೂಡಿದೆ.

ಬಿಜೆಪಿ  ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ  ರಂಜನ್ ಗೋಗಯ್ ಅವರಿದ್ದ ಪೀಠ, ಎಐಸಿಸಿ ಅಧ್ಯಕ್ಷ  ರಾಹುಲ್ ಗಾಂಧಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು.

ಅಲ್ಲದೇ ಈ ಕುರಿತು ರಾಹುಲ್ ಸಲ್ಲಿಸಿದ್ದ ಅಫಿಡವಿಟ್ ನಲ್ಲಿ ಕ್ಷಮೆ ಪದವನ್ನು ಬ್ರ್ಯಾಕೆಟ್ ನಲ್ಲಿ ಹಾಕಿದ್ದಕ್ಕೂ ನ್ಯಾಯಪೀಠ ಆಕ್ಷೇಪ ಸಲ್ಲಿಸಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುದ್ದಿನ ಶ್ವಾನಗಳಿಗಾಗಿ ಅನಿಮೇಟೆಡ್ ಸಿನಿಮಾ ಶೋ ಆಯೋಜಿಸಿದ ಥಿಯೇಟರ್: ರೆಡ್ ಕಾರ್ಪೆಟ್ ಹಾಸಿ ಸ್ವಾಗತ
ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ