'15 ಲಕ್ಷ ಬಂತೇ? ಜಿಎಸ್‌ಟಿ ಅರ್ಥವಾಯ್ತೇ? ಅಜರ್ ಬಿಟ್ಟಿದ್ದು ಯಾರು?'

Published : Mar 13, 2019, 09:32 AM IST
'15 ಲಕ್ಷ ಬಂತೇ? ಜಿಎಸ್‌ಟಿ ಅರ್ಥವಾಯ್ತೇ? ಅಜರ್ ಬಿಟ್ಟಿದ್ದು ಯಾರು?'

ಸಾರಾಂಶ

ಮೋದಿ ತವರರಲ್ಲಿ ರಾಹುಲ್ ವಾಗ್ದಾಳಿ: 15 ಲಕ್ಷ ಬಂತೇ? ಜಿಎಸ್‌ಟಿ ಅರ್ಥವಾಯ್ತೇ? ಅಜರ್ ಬಿಟ್ಟಿದ್ದು ಯಾರು?

ಅಹಮದಾಬಾದ್[ಮಾ.13]: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯದಲ್ಲಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮತ್ತೊಮ್ಮೆ ಮಸೂದ್ ಅಜರ್‌ನನ್ನು ಪ್ರಸಾ ್ತಪಿಸಿದ್ದಾರೆ. ಅದ್‌ಲಜ್‌ನಲ್ಲಿ ಚುನಾವಣಾ ರ‌್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಮಸೂದ್ ಅಜರ್‌ನನ್ನು ಈ ಹಿಂದೆ ಭಾರತದ ವಶದಿಂದ ಪಾಕಿಸ್ತಾನಕ್ಕೆ ವಿಶೇಷ ವಿಮಾನದಲ್ಲಿ ಕರೆದುಕೊಂಡು ಹೋಗಿ ಬಿಟ್ಟು ಬಂದವರು ಯಾರು? ಎಂದು ಪ್ರಶ್ನಿಸಿದರು.

ಮುಂದಿನ ತಿಂಗಳ ಲೋಕಸಭೆ ಚುನಾವಣೆಯಲ್ಲಿ ದ್ವೇಷದ ವಿರುದ್ಧ ಸತ್ಯ ಜಯ ಗಳಿಸಲಿದೆ.ಮೋದಿ ೨೦೧೪ರಲ್ಲಿ ಭರವಸೆ ನೀಡಿದ್ದಂತೆ ಭಾರತೀಯರ ಖಾತೆಗೆ ೧೫ ಲಕ್ಷ ರು. ಬಂದಿದೆಯೇ? ಗಬ್ಬರ್ ಸಿಂಗ್ ಟ್ಯಾಕ್ಸ್ (ಜಿಎಸ್‌ಟಿ) ನಿಮಗೆ ಈಗಲಾದರೂ ಅರ್ಥವಾಗಿದೆಯೇ ಎಂದು ಪ್ರಶ್ನಿಸಿದರು.

ಚೌಕೀದಾರ್ ಚೋರ್ ಹೈ: ರಾಹುಲ್ ವಿರುದ್ಧ ದೂರು

ಮುಂಬೈ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಪ್ರಕರಣ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪದೇ ಪದೇ ಬಳಸುವ ಚೌಕಿದಾರ್ ಚೋರ್ ಹೈ (ಕಾವಲುಗಾರ ಕಳ್ಳ) ಎಂಬ ಟೀಕೆ ಇದೀಗ ಅವರಿಗೇ ಸಂಕಷ್ಟ ತಂದಿಟ್ಟಿದೆ. ರಾಹುಲ್‌ರ ಈ ಹೇಳಿಕೆ ಸೆಕ್ಯುರಿಟಿ ಗಾರ್ಡ್‌ಗಳಿಗೆ ಮಾಡಿದ ಅವಮಾನ. ಹೀಗಾಗಿ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಕೇಸು ದಾಖಲಿಸುವಂತೆ ಮಹಾರಾಷ್ಟ್ರ ರಾಜ್ಯ ಸುರಕ್ಷಣಾ ರಕ್ಷಕ್ ಸಂಘಟನೆಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಪೊಲೀಸರಿಗೆ ಮನವಿ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಗ್ರಾಮ ನೆನೆದರೆ ಸಾಕು ಮಕ್ಕಳು ಹುಟ್ಟಾತ್ತಾರೆ, 1500 ಜನಸಂಖ್ಯೆಯ ಇಲ್ಲಿ 3 ತಿಂಗಳ ಜನನ 27,000
ತುಂಗಭದ್ರಾ ಜಲಾಶಯದ ಕ್ರಸ್ಟ್‌ಡ್ ಗೇಟ್‌ ಅಳವಡಿಕೆ ಹಿನ್ನೆಲೆ, 6 ತಿಂಗಳು ಕಾಲುವೆಗಳಿಗೆ ನೀರು ಸ್ಥಗಿತ!