
ನವದೆಹಲಿ (ಅ.10): ಅಮೇಥಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿಯನ್ನು ನೋಡಲು ಸಾಧ್ಯವಿಲ್ಲ ಯಾಕೆಂದರೆ ಅವರು ಇಟಾಲಿಯನ್ ಕನ್ನಡಕವನ್ನು ಹಾಕಿಕೊಂಡಿದ್ದಾರೆ. ಹಾಗಾಗಿ ಅವರಿಗೆ ದೇಶದ ಅಭಿವೃದ್ಧಿಯನ್ನು ನೋಡಲು ಸಾಧ್ಯವಿಲ್ಲ ಎಂದು ಅಮಿತ್ ಶಾ ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿ ಕ್ಷೇತ್ರವಾದ ಅಮೇಥಿಯಲ್ಲಿ ರ್ಯಾಲಿ ನಡೆಸುತ್ತಿರುವ ಅಮಿತ್ ಶಾ, ಅಲ್ಲಿ ಅಭಿವೃದ್ಧಿಯಾಗದೇ ಇರುವುದಕ್ಕೆ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು, 60 ವರ್ಷಗಳಿಂದ ದೇಶದ ಆಡಳಿತವನ್ನು ನಡೆಸಿದ್ದೀರಿ. ಆದರೂ ನಿಮ್ಮ ಕ್ಷೇತ್ರವನ್ನೇ ಅಭಿವೃದ್ಧಿಪಡಿಸಲು ಆಗಿಲ್ಲ. ಹಾಗಿರುವಾಗ ಪ್ರಧಾನಿ ನರೇಂದ್ರ ಮೋದಿಯವರ 3 ವರ್ಷದ ಅಭಿವೃದ್ಧಿ ಕಾರ್ಡನ್ನು ಕೇಳುತ್ತಿದ್ದೀರಿ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅಮೇಥಿಯಿಂದ ಸಂಸದನಾಗಿ ಹೋದ ಮೇಲೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೂ ಸಹ ಭೇಟಿ ನೀಡಿಲ್ಲ. ಆದರೆ ಸ್ಮೃತಿ ಇರಾನಿ ಅಮೇಥಿಯಲ್ಲಿ ಸೋತರೂ ಕೂಡಾ ಇಲ್ಲಿಗೆ ಭೇಟಿ ನೀಡಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.