ಪ್ರವಾಹ ಪೀಡಿತ ಪ್ರದೇಶ ಭೇಟಿ ಸಂದರ್ಭದಲ್ಲಿ ರಾಹುಲ್ ಗಾಂಧಿ ಕಾರಿಗೆ ಕಲ್ಲೆಸತ

By Suvarna Web DeskFirst Published Aug 4, 2017, 5:17 PM IST
Highlights

ಪ್ರವಾಹದಿಂದ ತತ್ತರಿಸಿರುವ ಬನಶಂಕರಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರಿಗೆ ಕಿಡಿಗೇಡಿಗಳು ಕಲ್ಲನ್ನು ಎಸೆದಿದ್ದಾರೆ. ಪ್ರವಾಹ ಸಂತ್ರಸ್ಥರನ್ನು ಭೇಟಿ ಮಾಡುವಾಗ ಕಪ್ಪುಬಾವುಟವನ್ನು ತೋರಿಸಿದ್ದಾರೆ ಎನ್ನಲಾಗಿದೆ.

ಗುಜರಾತ್  (ಆ.04): ಪ್ರವಾಹದಿಂದ ತತ್ತರಿಸಿರುವ ಬನಶಂಕರಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರಿಗೆ ಕಿಡಿಗೇಡಿಗಳು ಕಲ್ಲನ್ನು ಎಸೆದಿದ್ದಾರೆ. ಪ್ರವಾಹ ಸಂತ್ರಸ್ಥರನ್ನು ಭೇಟಿ ಮಾಡುವಾಗ ಕಪ್ಪುಬಾವುಟವನ್ನು ತೋರಿಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ಗೂಂಡಾಗಳು ಬನಶಂಕರಿ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಕಾರಿನ ಮೇಲೆ ದಾಳಿ ಮಾಡಿರುವುದು ನಾಚಿಕೆಗೇಡಿನ ಸಂಗತಿ. ಕಾರಿನ ಕಿಡಕಿ ಗಾಜು ಒಡೆದಿದೆ. ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಬಿಜೆಪಿ ಸತ್ಯವನ್ನು ತಿಳಿಯಲೇಬೇಕು. ಮೌನ ತಾಳಬಾರದು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸರ್ಜೆವಾಲಾ ಹೇಳಿದ್ದಾರೆ.  

Latest Videos

click me!