ದೇಶ ಜನರಿಂದಲೇ ಹೊರತು ತುಂಡು ಭೂಮಿಯಿಂದಲ್ಲ: ರಾಹುಲ್!

Published : Aug 06, 2019, 03:36 PM ISTUpdated : Aug 06, 2019, 05:11 PM IST
ದೇಶ ಜನರಿಂದಲೇ ಹೊರತು ತುಂಡು ಭೂಮಿಯಿಂದಲ್ಲ: ರಾಹುಲ್!

ಸಾರಾಂಶ

ವಿಶೇಷ ಸ್ಥಾನಮಾನ ರದ್ದತಿ ವಿರೋಧಿಸಿದ ರಾಹುಲ್ ಗಾಂಧಿ| ಕೇಂದ್ರ ಸರ್ಕಾರದ ನಿರ್ಧಾರ ತಪ್ಪು ಎಂದ ಕಾಂಗ್ರೆಸ್ ನಾಯಕ| ರಾಷ್ಟ್ರೀಯ ಭದ್ರತೆ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚು ಎಂದ ರಾಹುಲ್| ‘ಕೇಂದ್ರದ ಸರ್ಕಾರದ ನಿರ್ಧಾರ ಸಂಪೂರ್ಣ ಏಕಪಕ್ಷೀಯ’| 

ನವದೆಹಲಿ(ಆ.06): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ವಿಶೇಷ ಸ್ಥಾನಮಾನ ರದ್ದುಗೊಳಿಸುವ ಮೂಲಕ ಕೇಂದ್ರ ಸರ್ಕಾರ ಕಾಶ್ಮೀರ ಮಾತ್ರವಲ್ಲ, ಇಡೀ ದೇಶದ ಭಧ್ರತೆಗೆ ಧಕ್ಕೆ ತಂದಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

ಕೇಂದ್ರದ ಸರ್ಕಾರದ ಈ ನಿರ್ಧಾರ ಸಂಪೂರ್ಣ ಏಕಪಕ್ಷೀಯವಾಗಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.

ದೇಶವೊಂದು ಅಲ್ಲಿನ ಜನರಿಂದ ರೂಪಗೊಳ್ಳುತ್ತದೆಯೇ ಹೊರತು ತುಂಡು ಭೂಮಿಯಿಂದಲ್ಲ ಎಂದು ರಾಹುಲ್ ಮಾರ್ಮಿಕವಾಗಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ದಿಢೀರ್ ನಿರ್ಧಾರದಿಂದ ರಾಷ್ಟ್ರೀಯ ಭದ್ರತೆ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚು ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ಜಮ್ಮು ಕಾಶ್ಮೀರದ ವಿಚಾರದಲ್ಲಿ ಕಾಂಗ್ರೆಸ್‌ ಮುಂದಿನ ನಡೆಯ ಕುರಿತು ಚರ್ಚಿಸಲು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಇಂದು ಸಭೆ ಸೇರಲಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್
ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!