
ಆಗ್ರಾ (ಅ.02): ಕಿಸಾನ್ ಮಹಾಯಾತ್ರೆ ವೇಳೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿದ್ಯುತ್ ಅವಘಡದಿಂದ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಿನ್ನೆ ನಡೆದಿದೆ.
ಉತ್ತರ ಪ್ರದೇಶದ ಆಗ್ರಾದಲ್ಲಿ ಮಹಾರಾಜ ಅಗ್ರಸೇನಾ ಪ್ರತಿಮೆಗೆ ಮಾಲಾರ್ಪಣೆ ಮಾಡಿ ವೇದಿಕೆಯಿಂದ ಕೆಳಗಿಳಿಯುತ್ತಿರುವ ಸಂದರ್ಭದಲ್ಲಿ ವಿದ್ಯುತ್ ತಂತಿ ಅವರ ತಲೆಗೆ ತಾಗಿದೆ.
ತಕ್ಷಣ ಬಗ್ಗಿದ ರಾಹುಲ್ ಗಾಂಧಿ ಆ ಬಗ್ಗೆ ಸ್ಥಳೀಯ ಅರ್ಚಕರ ಗಮನ ಸೆಳೆದಿದ್ದಾರೆ. ಆ ಸಮಯದಲ್ಲಿ ತಂತಿಯಲ್ಲಿ ವಿದ್ಯುತ್ ಪ್ರವಾಹವಿತ್ತೋ ಇಲ್ಲವೋ ಎಂದು ಖಾತ್ರಿಯಾಗಿಲ್ಲ.
ಬಳಿಕ ರಕ್ಷಣಾ ಸಿಬ್ಬಂದಿ ಆ ತಂತಿಯನ್ನು ಮೇಲೆತ್ತಿ ರಾಹುಲ್ ಗಾಂಧಿ ವೇದಿಕೆಯಿಂದ ಕೆಳಗಿಳಿಯಲು ಸಹಕರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.