
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಾವು 2010 ರಿಂದ ಯಂಗ್ ಇಂಡಿಯಾ ಕಂಪನಿಯ ನಿರ್ದೇಶಕರಾಗಿದ್ದರೂ, ಈ ಸಂಗತಿಯನ್ನು ಮುಚ್ಚಿಟ್ಟಿರುವ ಕಾರಣಕ್ಕಾಗಿ 2011 - 12ನೇ ಸಾಲಿನ ತೆರಿಗೆ ಮೌಲ್ಯಮಾಪನ ವನ್ನು ಮರುತನಿಖೆ ನಡೆಸಲು ತೆರಿಗೆ ಇಲಾಖೆ ನಿರ್ಧರಿಸಿದೆ.
ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ದೆಹಲಿ ಹೈಕೋರ್ಟ್ನಲ್ಲಿ ಬುಧವಾರ ಅರ್ಜಿಯೊಂದನ್ನು ಸಲ್ಲಿಸಿದ್ದಾರೆ. ನ್ಯಾ| ಎಸ್. ರವೀಂದ್ರ ಭಟ್ ಹಾಗೂ ಎ.ಕೆ. ಚಾವ್ಲಾ ಅವರಿದ್ದ ಪೀಠ ವಿಚಾರಣೆಯನ್ನು ಆ. 14ಕ್ಕೆ ನಿಗದಿಪಡಿಸಿದೆ. ರಾಹುಲ್ ಗಾಂಧಿ ಅವರು ಯಂಗ್ ಇಂಡಿಯಾ ಕಂಪನಿಯಲ್ಲಿ ಹೊಂದಿರುವ ಷೇರುಗಳಿಂದ ಗಳಿಸಿದ್ದು 68 ಲಕ್ಷ ರು. ಅಲ್ಲ ಬದಲಾಗಿ 154 ಕೋಟಿ ರು. ಎಂದು ಆದಾಯ ತೆರಿಗೆ ಇಲಾಖೆ ಅಂದಾಜಿಸಿದೆ.
ಇದು ರಾಹುಲ್ ಗಾಂಧಿಗೆ ಸಂಕಷ್ಟ ತಂದೊಡ್ಡಿದೆ. ಇದೇ ವೇಳೆ ಆದಾಯ ತೆರಿಗೆ ನ್ಯಾಯಾಧಿಕರಣದಲ್ಲಿ ತೆರಿಗೆ ಮೌಲ್ಯಮಾಪನಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಗುರುವಾರದಂದು ನಿಗದಿಯಾಗಿರುವ ಕಾರಣಕ್ಕೆ ಕೋರ್ಟ್ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ರಾಹುಲ್ ಪರ ವಕೀ ಲರು ವಾದಿಸಿದ್ದರು. ಆದರೆ, ಇದಕ್ಕೆ ಹೆಚ್ಚುವರಿ ಸಾಲಿಸಿಟರ್ ಜನರಲ್ ತುಷಾರ್ ಮೆಹತಾ ವಿರೋಧ ವ್ಯಕ್ತಪಡಿಸಿದ್ದರಿಂದ ಕೊರ್ಟ್ ವಿಚಾರಣೆಮುಂದೂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.