
ನವದೆಹಲಿ (ಡಿ.15): ಪ್ರಧಾನಿ ಮೋದಿಯವರು ಭ್ರಷ್ಟಾಚಾರ ನಡೆಸಿದ್ದಾರೆನ್ನುವುದಕ್ಕೆ ನನ್ನ ಬಳಿ ಎಕ್ಸ್ ಕ್ಲೂಸಿವ್ ಸಾಕ್ಷಿಗಳಿವೆ ಎಂದಿರುವ ರಾಹುಲ್ ಗಾಂಧಿಗೆ ಸುಬ್ರಮಣಿಯನ್ ಸ್ವಾಮಿ ತಿರುಗೇಟು ನೀಡಿದ್ದಾರೆ. ಒಂದು ವೇಳೆ ಅಂತಹ ಸಾಕ್ಷಿಗಳಿದ್ದರೆ
ಅದನ್ನು ಪೋಲಿಸರು ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿ ಎಂದು ರಾಹುಲ್ ಗೆ ಹೇಳಿದ್ದಾರೆ.
ಯಾವುದಾದರೂ ಅಪರಾಧ, ಭ್ರಷ್ಟಾಚಾರ ನಡೆದಿರುವುದು ಗೊತ್ತಿದ್ದು ಅದನ್ನು ಪೋಲಿಸರಿಗೆ ತಿಳಿಸದೇ ಹೋದರೆ 3 ವರ್ಷ ಶಿಕ್ಷೆ ವಿಧಿಸಬಹುದು ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.
ರಾಹುಲ್ ಗಾಂಧಿ ಕಾನೂನಿಗೆ ತಲೆಬಾಗಿ ಆ ಎಕ್ಸ್ ಕ್ಲೂಸಿವ್ ಪುರಾವೆಯನ್ನು ನ್ಯಾಯಾಲಯಕ್ಕೆ ಅಥವಾ ಪೋಲಿಸರಿಗೆ ಸಲ್ಲಿಸಬೇಕು ಎಂದು ಸ್ವಾಮಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.