
ಸಿಂಧನೂರು: ಪ್ರಧಾನಿ ಮೋದಿ ಹಿನ್ನೋಟ ಕನ್ನಡಿ ನೋಡಿಕೊಂಡು ಗಾಡಿ ಓಡಿಸುವ ಮೂಲಕ ಅಪಘಾತಗಳಿಗೆ ಕಾರಣವಾಗುತ್ತಿದ್ದಾರೆ ಎಂದು ನಿನ್ನೆ ವ್ಯಂಗ್ಯವಾಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು, ವಿಕೆಟ್ ಕೀಪರನನ್ನು ನೋಡಿ ಬ್ಯಾಟಿಂಗ್ ಮಾಡುವ ಬ್ಯಾಟ್ಸ್’ಮ್ಯಾನ್’ಗೆ ಮೋದಿಯವರನ್ನು ಹೋಲಿಸಿದ್ದಾರೆ.
ಸಿಂಧನೂರಿನಲ್ಲಿ ಜನಾಶಿರ್ವಾದ ಸಭೆಯನ್ನುದ್ದೇಶಿಸಿ, ಬ್ಯಾಟಿಂಗ್ ಮಾಡುವ ವೇಳೆ ವಿಕೆಟ್ ಕೀಪರ್’ನನ್ನು ನೋಡುತ್ತಾ ಬ್ಯಾಟಿಂಗ್ ಮಾಡಿದ್ದರೆ ಸಚಿನ್ ತೆಂಡೂಲ್ಕರ್ ರನ್ ಗಳಿಸಲು ಸಾಧ್ಯವಿತ್ತೇ? ಎಂದು ಪ್ರಶ್ನಿಸಿದ ರಾಹುಲ್, ಪ್ರಧಾನಿ ಮೋದಿಯವರು ವಿಕೆಟ್ ಕೀಪರ್’ನತ್ತ ನೋಡುತ್ತಾ ಬ್ಯಾಟಿಂಗ್ ಮಾಡುತ್ತಿದ್ದಾರೆ. ಬಾಲ್ ಎಲ್ಲಿಂದ ಬರುತ್ತಿದೆ ಎಂದೇ ಅವರಿಗೆ ಗೊತ್ತಿಲ್ಲ, ಎಂದು ವ್ಯಂಗ್ಯವಾಡಿದ್ದಾರೆ.
ಕಳೆದ ಬುಧವಾರ ಸಂಸತ್ತಿನಲ್ಲಿ ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ವೇಳೆ ಪ್ರಧಾನಿ ಮೋದಿ ತಮ್ಮ ಭಾಷಣದುದ್ದಕ್ಕೂ ನೆಹರೂ ನೀತಿಗಳನ್ನು ಹಾಗೂ ಕಾಂಗ್ರೆಸ್’ನ್ನು ಟೀಕಿಸಿದ್ದರು.
ಶನಿವಾರದಂದು ಬಳ್ಳಾರಿ ಜನಾಶಿರ್ವಾದ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡುವ ಸಂದರ್ಭದಲ್ಲೂ, ಪ್ರಧಾನಿ ಮೋದಿ ಹಿನ್ನೋಟ ಕನ್ನಡಿ ನೋಡಿಕೊಂಡು ಗಾಡಿ ಓಡಿಸುವ ಮೂಲಕ ಅಪಘಾತಗಳಿಗೆ ಕಾರಣವಾಗುತ್ತಿದ್ದಾರೆ, ಮುಂದೆ ನೋಡಿ ಗಾಡಿ ಓಡಿಸಿ ಎಂದು ಟೀಕಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.