
ನವದೆಹಲಿ : ಜರ್ಮನಿಯಲ್ಲಿ ಭಾರತಕ್ಕೆ ತಮ್ಮ ಭಾಷಣದ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವಮಾನಿಸಿದ್ದಾರೆ. ಅಲ್ಲದೇ ಉಗ್ರವಾದವನ್ನು ಸಮರ್ಥಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ಬಗ್ಗೆಯೂ ಕೂಡ ಮನ ಬಂದಂತೆ ಮಾತನಾಡಿದ್ದಾರೆ ಎಂದು ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ವಕ್ತಾರರಾದ ಸಂಬಿತ್ ಪಾತ್ರ ಈ ಬಗ್ಗೆ ಪ್ರತಿಕ್ರಿಯಿಸಿ ರಾಹುಲ್ ಗಾಂಧಿ ತಮ್ಮ ಈ ಮಾತುಗಳ ಬಗ್ಗೆ ಕ್ಷಮೆಯಾಚಿಸಬೇಕು. ಬೇರೆ ದೇಶಗಳಲ್ಲಿ ನಮ್ಮ ದೇಶದ ಬಗ್ಗೆ ಇಂತಹ ಮಾತಗಳನ್ನಾಡಿರುವು ಅಕ್ಷಮ್ಯ ಎಂದಿದ್ದಾರೆ.
ಹ್ಯಾಮ್ ಬರ್ಗ್ ನಲ್ಲಿ ಗುರುವಾರ ಮಾತನಾಡಿದ ರಾಹುಲ್ ಗಾಂಧಿ ಐಸಿಸ್ ಉಗ್ರವಾದದ ಬಗ್ಗೆ ಮಾತನಾಡಿ ಔದ್ಯೋಗಿಕ ಸಮಸ್ಯೆಯ ಕಾರಣದಿಂದ ಐಸಿಸ್ ಉಗ್ರವಾದ ಸೃಷ್ಟಿಯಾಗುತ್ತಿದೆ ಎಂದು ಹೇಳಿದ್ದರು.
ಈ ಮೂಲಕ ಭಾರತದಲ್ಲಿಯೂ ಸೂಕ್ತ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗದೇ ಹೋದಲ್ಲಿ ಇಲ್ಲಿಯೂ ಉದ್ಯೋಗ ವಂಚಿತರು ಉಗ್ರರಾಗಲಿದ್ದಾರೆ ಎಂಬರ್ಥದಲ್ಲಿ ಅವರು ಹೇಳಿಕೆ ನೀಡಿದ್ದರು. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.