ರಾಹುಲ್ ಒಬ್ರೆನಾ?: ಪ್ರಧಾನಿ ಹುದ್ದೆಗೆ ತೇಜಸ್ವಿ ಅಪಸ್ವರ!

Published : Jul 24, 2018, 05:56 PM ISTUpdated : Jul 24, 2018, 06:21 PM IST
ರಾಹುಲ್ ಒಬ್ರೆನಾ?: ಪ್ರಧಾನಿ ಹುದ್ದೆಗೆ ತೇಜಸ್ವಿ ಅಪಸ್ವರ!

ಸಾರಾಂಶ

ರಚನೆಯಾಗದ ಮಹಾಘಟಬಂಧನ್ ನಲ್ಲಿ ಬಿರುಕು? ಪ್ರಧಾನಿ ಹುದ್ದೆ ರೇಸ್‌ನಲ್ಲಿ ರಾಹುಲ್ ಮಾತ್ರ ಇಲ್ಲ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿಕೆ ಇತರ ನಾಯಕರನ್ನೂ ಪರಿಗಣಿಸಲು ತೇಜಸ್ವಿ ಸಲಹೆ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವುದೇ ಸವಾಲು

ಪಾಟ್ನಾ(ಜು.24): ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ರೇಸ್‌ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ಮಾತ್ರವಲ್ಲದೆ ಇತರೆ ನಾಯಕರೂ ಇದ್ದಾರೆ ಎಂದು ಬಿಹಾರದ ಮಾಜಿ ಡಿಸಿಎಂ, ಆರ್ ​ಜೆಡಿ ಮುಖಂಡ ತೇಜಸ್ವಿ ಯಾದವ್ ಹೇಳಿದ್ದಾರೆ.

ಪ್ರತಿಪಕ್ಷಗಳು ತಮ್ಮ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲಿವೆ. ಪ್ರಧಾನಿ ಅಭ್ಯರ್ಥಿಯ ರೇಸ್‌ನಲ್ಲಿ ರಾಹುಲ್​ ಗಾಂಧಿ ಮಾತ್ರವಲ್ಲದೇ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್​, ಬಿಎಸ್​ ಸಿಪಿ ನಾಯಕಿ ಮಾಯಾವತಿ ಅವರೂ ಇದ್ದಾರೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದೇ ವೇಳೆ, ಮೈತ್ರಿ ಕೂಟದಿಂದ ಯಾರೇ ಪ್ರಧಾನಮಂತ್ರಿ ಅಭ್ಯರ್ಥಿಯಾದರೂ ಅವರಿಗೆ ಆರ್‌ಜೆರ್ ಪಕ್ಷದ ಸಂಪೂರ್ಣ ಬೆಂಬಲ ಇರಲಿದೆ ಎಂದು ತೇಜಸ್ವಿ ಸ್ಪಷ್ಟಪಡಿಸಿದ್ದಾರೆ.

ಸಂವಿಧಾನವನ್ನು ರಕ್ಷಣೆ ಮಾಡುವ ನಾಯಕನನ್ನು ಬೆಂಬಲಿಸುವುದು ನಮ್ಮ ಉದ್ದೇಶವಾಗಿದೆ. ಆದರೆ, ರಾಹುಲ್​ ಗಾಂಧಿ ಬಿಜೆಪಿಯೇತರ ಪಕ್ಷಗಳನ್ನು ಸಂಘಟಿಸಿ, ಮಹಾಮೈತ್ರಿ ಕೂಟದ ವೇದಿಕೆಗೆ ಕರೆತರಬೇಕಿದೆ ಎಂದು ತೇಜಸ್ವಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಧ್ಯೆ ಖುರ್ಚಿ ಕಾದಾಟ ಇಲ್ಲ: ಬಸವರಾಜ ರಾಯರೆಡ್ಡಿ
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!