
ನವದೆಹಲಿ(ಜು.09): ಲೋಕಸಭೆಯಲ್ಲಿ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಘೋಷಣೆಗಳನ್ನು ಕೂಗುವುದರ ಮೂಲಕ ಗಮನ ಸೆಳೆದಿದ್ದಾರೆ.
ಸದನದಲ್ಲಿ ಕರ್ನಾಟಕ ರಾಜಕಾರಣದ ವಿಪ್ಲವದ ಕುರಿತು ಚರ್ಚೆ ನಡೆಯುತ್ತಿತ್ತು. ಆದರೆ ಈ ವೇಳೆ ಸ್ಪೀಕರ್ ಪ್ರತಿಕ್ರಿಯೆ ಕಂಡು ಸಿಟ್ಟಾದ ರಾಹುಲ್, ಕೂಡಲೇ ಹಾಳೆಯ ಮೇಲೆ ತಾನಾ ಶಾಹೀ ಬಂದ್ ಕರೋ(ಸರ್ವಾಧಿಕಾರಿ ಧೋರಣೆ ನಿಲ್ಲಿಸಿ) ಎಂದು ಬರೆದು ಭಿತ್ತಿಪತ್ರ ಪ್ರದರ್ಶಿಸಿದರು.
ರಾಹುಲ್ ಅವರಿಗೆ ಸಾಥ್ ನೀಡಿದ ಇತರ ಕಾಂಗ್ರೆಸ್ ಸದಸ್ಯರು, ಕರ್ನಾಟಕದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಸಂಸದರಾದ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಸದನದಲ್ಲಿ ಘೋಷಣೆ ಕೂಗಿದ್ದು, ಕಾಂಗ್ರೆಸ್ ಸದಸ್ಯರನ್ನಷ್ಟೇ ಅಲ್ಲದೇ ಬಿಜೆಪಿ ಸದಸ್ಯರನ್ನೂ ಅಚ್ಚರಿಗೆ ದೂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.