ಕೈಲಾಸ ಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಿ ರಾಹುಲ್ ಗಾಂಧಿ ವಾಪಸ್ಸಾಗಿದ್ದೇಕೆ?

Published : Sep 11, 2018, 08:40 AM ISTUpdated : Sep 19, 2018, 09:22 AM IST
ಕೈಲಾಸ ಯಾತ್ರೆ ಅರ್ಧಕ್ಕೆ ಮೊಟಕುಗೊಳಿಸಿ ರಾಹುಲ್ ಗಾಂಧಿ ವಾಪಸ್ಸಾಗಿದ್ದೇಕೆ?

ಸಾರಾಂಶ

ಮಾನಸ ಸರೋವರ ಯಾತ್ರೆಯಿಂದ ಬೇಗನೇ ವಾಪಸ್ಸಾದ ರಾಹುಲ್ ಗಾಂಧಿ | ಭಾರತ್ ಬಂದ್‌ನಲ್ಲಿ ಭಾಗಿ | ಗಾಂಧೀಜಿ ಅವರ ಸಮಾಧಿ ಸ್ಥಳ ರಾಜಘಾಟ್‌ಗೆ ತೆರಳಿ ರಾಹುಲ್, ಕೈಲಾಸ- ಮಾನಸ ಸರೋವರದಿಂದ ತಂದಿದ್ದ ಪವಿತ್ರ ಜಲವನ್ನು ಸಮಾಧಿಗೆ ಅರ್ಪಿಸಿದರು. 

ನವದೆಹಲಿ (ಸೆ. 11): ಕರ್ನಾಟಕ ಚುನಾವಣೆ ವೇಳೆ ಹೊತ್ತಿದ್ದ ‘ಹರಕೆ’ಯಂತೆ ಕೈಲಾಸ- ಮಾನಸ ಸರೋವರ ಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಯಾತ್ರೆ ಮೊಟಕುಗೊಳಿಸಿ ದಿಢೀರನೆ ದೆಹಲಿಗೆ ವಾಪಸ್ ಆಗಿದ್ದಾರೆ. ಇದು ಕಾಂಗ್ರೆಸ್ಸಿಗರ ಅಚ್ಚರಿಗೆ ಕಾರಣವಾಗಿದೆ.

ರಾಹುಲ್ ಅವರು ಯಾತ್ರೆ ಮುಗಿಸಿ ಗುರುವಾರ ಅಥವಾ ಶುಕ್ರವಾರ ದೆಹಲಿಗೆ ಹಿಂತಿರುಗಬಹುದು ಎಂದು ಹೇಳಲಾಗಿತ್ತು. ಆದರೆ ಸೋಮವಾರವೇ ಮರಳಿದ ಅವರು, ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ಬಂದ್ ವೇಳೆ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಭಾರತ್ ಬಂದ್‌ನಂತಹ ದೊಡ್ಡ ಹೋರಾಟಕ್ಕೆ ಕರೆ ನೀಡಿದ್ದರೂ, ರಾಹುಲ್ ಗಾಂಧಿ ಅವರು ಭಾಗವಹಿಸದೇ ಇದ್ದದ್ದು ಕಾಂಗ್ರೆಸ್ಸಿಗರ ಕಸಿವಿಸಿಗೆ ಕಾರಣವಾಗಿತ್ತು.

ಗಾಂಧಿ ಸಮಾಧಿಗೆ ಪವಿತ್ರ ಜಲ: ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಹಾತ್ಮ ಗಾಂಧೀಜಿ ಅವರ ಸಮಾಧಿ ಸ್ಥಳ ರಾಜಘಾಟ್‌ಗೆ ತೆರಳಿದ ರಾಹುಲ್, ಕೈಲಾಸ- ಮಾನಸ ಸರೋವರದಿಂದ ತಂದಿದ್ದ ಪವಿತ್ರ ಜಲವನ್ನು ಸಮಾಧಿಗೆ ಅರ್ಪಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!