'ರಾಹುಲ್‌ ರಾಜೀನಾಮೆ ಆತ್ಮಹತ್ಯೆಗೆ ಸಮ'

Published : May 29, 2019, 12:19 PM IST
'ರಾಹುಲ್‌ ರಾಜೀನಾಮೆ ಆತ್ಮಹತ್ಯೆಗೆ ಸಮ'

ಸಾರಾಂಶ

ರಾಹುಲ್‌ ರಾಜೀನಾಮೆ ಆತ್ಮಹತ್ಯೆಗೆ ಸಮ| ಬಿಜೆಪಿಯ ಮುಂದೆ ಮಂಡಿಯೂರಿ ಮಣಿದಂತೆ| ರಾಹುಲ್ ರಾಜೀನಾಮೆಗೆ ಆರ್‌ಜೆಟಿ ನಾಯಕನ ಪ್ರತಕ್ರಿಯೆ

ಪಟನಾ[ಮೇ.29]: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ರಾಹುಲ್‌ ಗಾಂಧಿ ಅವರ ನಿರ್ಧಾರ ಪಕ್ಷದ ಆತ್ಮಹತ್ಯೆಗೆ ಸಮ. ಜೊತೆಗೆ ಬಿಜೆಪಿಯ ಮುಂದೆ ಮಂಡಿಯೂರಿ ಮಣಿದಂತೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅಭಿಪ್ರಾಯಪಟ್ಟಿದ್ದಾರೆ.

ಲೋಕಸಭಾ ಚುನಾವಣೆಯಲ್ಲಾದ ಮುಖಭಂಗದಿಂದ ಸೋಲಿನ ಹೊಣೆಯನ್ನು ಸ್ವತಃ ತಾವೇ ಹೊತ್ತ ರಾಹುಲ್‌ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಅವರ ಈ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಲಾಲು ಪ್ರಸಾದ್‌, ಇದು ಪಕ್ಷವನ್ನು ಆತ್ಮಹತ್ಯೆಗೆ ತಳ್ಳಿದಂತೆಯೇ ಹೊರತು ಮತ್ತಿನ್ನೇನಲ್ಲ.

ಇದರ ಬದಲಾಗಿ ಸಂಘ ಪರಿಹಾರದ ಸವಾಲನ್ನು ಸಾಮಾಜಿಕ ಹಾಗೂ ರಾಜಕೀಯವಾಗಿ ಎದುರಿಸುವ ದಿಟ್ಟತನ ತೋರಬೇಕು. ಬೇರಿನ್ನಾರೇ ಅಧ್ಯಕ್ಷರಾದರೂ ರಾಹುಲ್‌ ಮತ್ತು ಸೋನಿಯಾ ಅವರ ಮಾರ್ಗದರ್ಶನ ಬೇಕೇಬೇಕು. ಆ ಕಾರಣಕ್ಕಾಗಿ ರಾಹುಲ್‌ ಹುದ್ದೆಯಲ್ಲಿ ಮುಂದುವರಿಯುವುದು ಸೂಕ್ತ ಎಂದು ಟ್ವೀಟ್‌ ಮಾಡಿಸುವ ಮೂಲಕ ತಮ್ಮ ಸಂದೇಶ ರವಾನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು