
ನವದೆಹಲಿ(ಸೆ.25): ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಹಗರಣದ ಕುರಿತು ಮುಂದಿನ ದಿನಗಳಲ್ಲಿ ಸರ್ಕಾರದ ಹಲವು ತಪ್ಪುಗಳನ್ನು ಬಹಿರಂಗಪಡಿಸುವುದಾಗಿ ಎಚ್ಚರಿಕೆಯನ್ನು ರಾಹುಲ್ ನೀಡಿದ್ದಾರೆ.
ಸ್ವಕ್ಷೇತ್ರ ಅಮೇಥಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದು, ಮುಂದಿನ 3 ತಿಂಗಳುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಹಲವು ತಪ್ಪುಗಳನ್ನು ಬಹಿರಂಗಪಡಿಸುವುದಾಗಿ ಈ ವೇಳೆ ರಾಹುಲ್ ಹೇಳಿದ್ದಾರೆ.
ಭ್ರಷ್ಟಾಚಾರವನ್ನು ತೊಲಗಿಸುವುದಾಗಿ ಹೇಳಿಕೊಂಡು ಅಧಿಕಾರಕ್ಕೆ ಬಂದ ವ್ಯಕ್ತಿಯೊಬ್ಬರು ಅನಿಲ್ ಅಂಬಾನಿಯವರಿಗೆ 30 ಸಾವಿರ ಕೋಟಿ ನೀಡಿದ್ದಾರೆ. ಇದು ಕೇವಲ ಆರಂಭವಷ್ಟೇ ಮುಂದಿನ ದಿನಗಳಲ್ಲಿ ಸರ್ಕಾರ ಮತ್ತಷ್ಟು ವೈಫಲ್ಯಗಳನ್ನು ಬಹಿರಂಗಪಡಿಸುತ್ತೇವೆಂದು ರಾಹುಲ್ ಗುಡುಗಿದರು.
ರಫೇಲ್ ಒಪ್ಪಂದ, ವಿಜಯ್ ಮಲ್ಯ, ಲಲಿತ್ ಮೋದಿ, ನೋಟು ನಿಷೇಧ, ಗಬ್ಬರ್ ಸಿಂಗ್ ಟ್ಯಾಕ್ಸ್ (ಜಿಎಸ್ ಟಿ) ಈ ಎಲ್ಲಾ ಪ್ರಕರಣಗಳಲ್ಲೂ ಮೋದಿ ಸರ್ಕಾರದ ತಪ್ಪುಗಳಾಗಿವೆ. ಈ ಎಲ್ಲಾ ಪ್ರಕರಣಗಳು ಒಂದರ ಹಿಂದೆ ಒಂದರಂತೆ ಮೋದಿಯವರು ಚೌಕಿದಾರನಲ್ಲ, ಒಬ್ಬ ಕಳ್ಳನೆಂದು ಸಾಬೀತುಪಡಿಸುತ್ತವೆ ಎಂದು ರಾಹುಲ್ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.