
ನವದೆಹಲಿ : ರಾಷ್ಟ್ರರಾಜಕಾರಣದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರ ಮುಂದುವರಿದಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮತ್ತೊಮ್ಮೆ ರಫೇಲ್ ವಿಚಾರವನ್ನು ಇರಿಸಿಕೊಂಡು ವಾಗ್ದಾಳಿ ನಡೆಸಿದ್ದು ಜಾಗತಿಕವಾಗಿ ಭಾರತದ ಗೌರವವನ್ನು ಕಡಿಮೆ ಮಾಡಿದ್ದಾರೆ.
ಅಲ್ಲದೇ ಫೇಸ್ ಬುಕ್ ಹಾಗೂ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದು ಎನ್ ಡಿ ಎ ಸರ್ಕಾರ ರಫೇಲ್ ಡೀಲ್ ಅನ್ನು ಎಚ್ ಎ ಎಲ್ ನಿಂದ ಕಿತ್ತುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೇ ಯುಪಿಎ ಸರ್ಕಾರದ ಈ ಯೋಜನೆಯಲ್ಲಿ ಬದಲಾವಣೆ ಮಾಡಿ ಅಕ್ರಮ ಎಸಗಲಾಗಿದೆ ಎಂದು ಹೇಳಿದ್ದಾರೆ. ಇದರಿಂದ ಭಾರತದ ಭವಿಷ್ಯದ ಮೇಲೆ ಸಾಕಷ್ಟು ರೀತಿಯಲ್ಲಿ ಸಮಸ್ಯೆ ಎದುರಾಗುವಂತೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.