
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮೋದಿ ಅವರು ರೈತರ ಹಿತಾಸಕ್ತಿ ಬದಿಗೊತ್ತಿ, 15 ಕೈಗಾರಿಕೋದ್ಯಮಿಗಳ 2.5 ಲಕ್ಷ ಕೋಟಿ ರು. ಸಾಲ ಮನ್ನಾ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸೋಮವಾರ ಪಕ್ಷದ ಹಿಂದುಳಿದ ವರ್ಗದ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ‘ಯಾರು ಬೆವರು ಸುರಿಸಿ ದುಡಿದರೋ ಅವರಿಗೆ ಪ್ರತಿಫಲ ದೊರಕುತ್ತಿಲ್ಲ. ಅದರ ಫಲವನ್ನು ಇನ್ನೊಬ್ಬರು ಉಣ್ಣುತ್ತಿದ್ದಾರೆ’ ಎಂದು ಆರೋಪಿಸಿದರು.
ಕೌಶಲ್ಯ ಇದ್ದವರಿಗೂ ದೇಶದಲ್ಲಿ ಬೆಲೆ ಇಲ್ಲವಾಗಿದೆ. ರೈತರು ಮಾಡಿದ ಸಾಧನೆ ಮೋದಿ ಅವರ ಕಣ್ಣಿಗೆ ಕಾಣದಾಗಿದೆ. ಬ್ಯಾಂಕ್ಗಳ ಅನುತ್ಪಾದಕ ಆಸ್ತಿ 1 ಸಾವಿರ ಕೋಟಿ ರು.ಗಳಿಗೆ ಏರಿದೆ ಎಂದು ಆಪಾದಿಸಿದರು.
‘15 ಉದ್ಯಮಿಗಳಿಗೆ 2.5 ಲಕ್ಷ ಕೋಟಿ ರು. ಸಾಲ ನೀಡಲಾಗಿತ್ತು. ಆತ್ಮಹತ್ಯೆ ಮಾಡಿಕೊಳ್ಳುವ ರೈತರಿಗೆ ಏನೂ ಸಿಗಲಿಲ್ಲ. ಆದರೆ ಈ 15 ಜನರಿಗೆ ಮಾತ್ರ ಸಾಲ ಮನ್ನಾ ಭಾಗ್ಯ ದೊರಕಿತು ಎಂದು ಆಪಾದಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.