ಮೋದಿಯಿಂದ ಅಂಬಾನಿಗೊಂದು, ರೈತರಿಗೊಂದು ಭಾರತ ಸೃಷ್ಟಿ: ರಾಹುಲ್‌

Published : Dec 04, 2018, 09:11 AM IST
ಮೋದಿಯಿಂದ  ಅಂಬಾನಿಗೊಂದು, ರೈತರಿಗೊಂದು  ಭಾರತ ಸೃಷ್ಟಿ: ರಾಹುಲ್‌

ಸಾರಾಂಶ

ಮೋದಿಯಿಂದ 2 ರೀತಿಯ ಭಾರತ ಸೃಷ್ಟಿ: ರಾಹುಲ್‌ ಗಾಂಧಿ |  ಒಂದು ಅಂಬಾನಿಗೆ, ಮತ್ತೊಂದು ರೈತರಿಗೆ   

ನವದೆಹಲಿ (ಡಿ. 04): 750 ಕೆ.ಜಿ. ಈರುಳ್ಳಿ ಮಾರಾಟ ಮಾಡಿದ ಮಹಾರಾಷ್ಟ್ರ ರೈತನೊಬ್ಬನಿಗೆ ಕೇವಲ 1040 ರು. ಸಿಕ್ಕ ವರದಿಯನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಟೀಕಾ ಪ್ರಹಾರ ನಡೆಸಿದ್ದಾರೆ. ಪ್ರಧಾನಮಂತ್ರಿಗಳು ದೇಶದಲ್ಲಿ ಎರಡು ರೀತಿಯ ಭಾರತ ಸೃಷ್ಟಿಸುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

‘ಮೋದಿ ಅವರು ಎರಡು ಹಿಂದುಸ್ತಾನಗಳನ್ನು ಸೃಷ್ಟಿಸುತ್ತಿದ್ದಾರೆ. ಒಂದು ಅನಿಲ್‌ ಅಂಬಾನಿ ಅವರಿಗೆ. ಏನನ್ನೂ ಮಾಡದೇ, ಏರೋಪ್ಲೇನ್‌ ಮಾಡುವುದು ಗೊತ್ತಿಲ್ಲದೇ 30 ಸಾವಿರ ಕೋಟಿ ರು. ಮೌಲ್ಯದ ರಫೇಲ್‌ ಗುತ್ತಿಗೆಯನ್ನು ಅಂಬಾನಿ ಪಡೆಯುತ್ತಾರೆ. ಮೋದಿ ಅವರ ಮತ್ತೊಂದು ಹಿಂದುಸ್ತಾನ ರೈತರಿಗೆ. ನಾಲ್ಕು ತಿಂಗಳ ಕಾಲ ಉಳುಮೆ ಮಾಡಿ 750 ಕೆ.ಜಿ. ಈರುಳ್ಳಿ ಬೆಳೆದರೂ ಮೋದಿ ಅವರಿಂದ ರೈತನಿಗೆ ಕೇವಲ 1040 ರು. ಲಭಿಸುತ್ತದೆ’ ಎಂದು ರಾಹುಲ್‌ ಟ್ವೀಟ್‌ ಮಾಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ