
ನವದೆಹಲಿ(ನ.12): ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೂ 500 ಹಾಗೂ 1000 ರುಪಾಯಿ ನೋಟ್ ನಿಷೇಧದ ಬಿಸಿ ತಟ್ಟಿದ್ದು, ನೋಟ್ ಬದಲಾವಣೆಗಾಗಿ ಇಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ತೆರಳಿ ಜನಸಾಮಾನ್ಯರಂತೆ ಕ್ಯೂನಲ್ಲಿ ನಿಂತಿದ್ದರು.
ಬೆಳಗ್ಗೆ ಸಂಸತ್ ರಸ್ತೆಯಲ್ಲಿರುವ ಎಸ್ ಬಿಐ ಬ್ಯಾಂಕ್ ಗೆ ಭೇಟಿ ನೀಡಿದ ರಾಹುಲ್ ಗಾಂಧಿ 4000 ರುಪಾಯಿ ಬದಲಾವಣೆಗಾಗಿ ಕ್ಯೂನಲ್ಲಿ ನಿಂತಿದ್ದರು.ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ನಾನು ನಾಲ್ಕು ಸಾವಿರ ರುಪಾಯಿ ವಿನಿಮಯ ಮಾಡಿಕೊಳ್ಳಲು ಬಂದಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ ಸಾಮಾನ್ಯರ ಕಷ್ಟ ಅರ್ಥವಾಗುವುದಿಲ್ಲ. ಕೇಂದ್ರದ ಈ ನಿರ್ಧಾರದಿಂದಾಗಿ ಬಡವರು ಪರದಾಡುವಂತಾಗಿದೆ.
ಸೂಟ್, ಬೂಟ್ ಧರಿಸಿದ ಕೋಟ್ಯಾಧೀಶರು ಯಾರಾದರೂ ಕ್ಯೂನಲ್ಲಿದ್ದಾರೆಯೇ? ಹಾಗಾದರೆ ಸರ್ಕಾರ ಯಾರಿಗಾಗಿ ಹೊಸ ಕಾನೂನು ತಂದಿದೆ? ಎಂದು ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.