
ನವದೆಹಲಿ (ಜೂ.04): ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಫೋಬಿಯಾದಿಂದ ನರಳುತ್ತಿದ್ದಾರೆ. ಕಾಶ್ಮೀರ ಕಣಿವೆ ಪ್ರದೇಶದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲವೆಂದು ಬಿಜೆಪಿ ನಾಯಕ ಸುದೇಶ್ ವರ್ಮಾ ವ್ಯಂಗ್ಯವಾಡಿದ್ದಾರೆ.
ಕಣಿವೆ ಪ್ರದೇಶದಲ್ಲಿ ಭಯೋತ್ಪಾದನೆ ಕಡಿಮೆಯಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ನೀಡಿದ ಅಂಕಿ-ಅಂಶಗಳನ್ನು ರಾಹುಲ್ ಗಾಂಧಿ ನೋಡಲು ಇಷ್ಟಪಡುವುದಿಲ್ಲ. ಯುಪಿಎ ಆಡಳಿತಕ್ಕೆ ಹೋಲಿಸಿದರೆ ಕಳೆದ ಮೂರು ವರ್ಷದಲ್ಲಿ ಎನ್ ಡಿಎ ಸರ್ಕಾರ ಭಯೋತ್ಪಾದನೆಯನ್ನು ಮಟ್ಟ ಹಾಕಿದೆ ಎಂದು ಸುದೇಶ್ ವರ್ಮಾ ಹೇಳಿದ್ದಾರೆ. ಕಾಶ್ಮೀರ ಕಣಿವೆ ವಿಚಾರದಲ್ಲಿ ಮೋದಿ ಸರ್ಕಾರವನ್ನು ಟೀಕಿಸುವ ಮುನ್ನ 2010 ರಲ್ಲಿ ನಡೆದ ಇಂತಹದೇ ಘಟನೆಯನ್ನು ಅವರೊಮ್ಮೆ ಅವಲೋಕಿಸಲಿ ಎಂದು ವರ್ಮಾ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.