
ಬೆಂಗಳೂರು: ಕಳೆದ ಬಾರಿಯೂ ಪ್ರಧಾನಿ ಮೋದಿ ‘ಮನ್ ಕೀ ಬಾತ್’ಗೆ ಸಲಹೆ ನೀಡಿದ್ದ ರಾಹುಲ್ ಗಾಂಧಿ ಈ ಬಾರಿಯೂ ಸಲಹೆಗಳನ್ನು ನೀಡಿದ್ದಾರೆ.
ಕಳೆದ ಬಾರಿಯೂ ನೀಡಿದ್ದ ಸಲಹೆಗಳನ್ನು ನೀವು ನಿರ್ಲಕ್ಷಿಸಿದ್ದೀರಿ. ದೇಶದ ಜನತೆ ನಿಮ್ಮಿಂದ ಏನನ್ನು ಕೇಳಲು ಬಯಸುತ್ತಾರೆ ಎಂದು ಗೊತ್ತಿದ್ದೂ, ಸಲಹೆಗಳನ್ನು ಯಾಕೆ ಕೇಳ್ತಿರಾ? ಎಂದು ಟ್ವೀಟಿಸಿರುವ ರಾಹುಲ್ ಗಾಂಧಿ, 'ನೀರವ್ ಮೋದಿಯ 22000 ಕೋಟಿ ಲೂಟಿ & ಪರಾರಿ' ಹಾಗೂ '58000 ಕೋಟಿ ರಫೇಲ್ ಹಗರಣ' ಬಗ್ಗೆ ನೀವು ಮಾತನಾಡುತ್ತೀರಿ ಎಂದು ನಿರೀಕ್ಷಿಸುತ್ತೇನೆ ಎಂದು ಹೇಳಿದ್ದಾರೆ.
ಕಳೆದ ಬಾರಿಯೂ ಪ್ರಧಾನಿಗೆ ಸಲಹೆ ನೀಡಿದ್ದ ರಾಹುಲ್ ಗಾಂಧಿ, ಯುವಜನರಿಗೆ ಯಾವಾಗ ಉದ್ಯೋಗ ಸಿಗುವುದು?, ಡೋಕ್ಲಾಮ್’ನಿಂದ ಚೀನಾವನ್ನು ಹಿಮ್ಮೆಟ್ಟಿಸುವುದು ಯಾವಾಗ? ಹಾಗೂ ಹರ್ಯಾಣದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಯಾವಾಗ ನಿಲ್ಲುತ್ತದೆ ಎಂಬ ವಿಷಯಗಳ ಬಗ್ಗೆ ಪ್ರಧಾನಿ ಮಾತನಾಡಬೇಕೆಂದು ಕೇಳಿಕೊಂಡಿದ್ದರು.
ಫೆ.25ಕ್ಕೆ ಪ್ರಧಾನಿ ಮೋದಿ ‘ಮನ್ ಕೀ ಬಾತ್’ನಲ್ಲಿ ಮಾತನಾಡಲಿದ್ದು, ಜನರಿಂದ ಸಲಹೆಗಳನ್ನು ಕೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.