
ಶ್ರೀನಗರ[ಆ.13]: ಜಮ್ಮು ಕಾಶ್ಮೀರ ಪ್ರವಾಸದ ಆಫರ್ ನೀಡಿದ್ದ, ಇದಕ್ಕಾಗಿ ಹೆಲಿಕಾಪ್ಟರ್ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದ ರಾಜ್ಯಪಾಲ ಸತ್ಯಪಾಲ ಮಲಿಕ್ ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಹೆಲಿಕಾಪ್ಟರ್ ನೀಡದಿದ್ದರೂ ಪರವಾಗಿಲ್ಲ, ಆದರೆ ನನಗೆ ಹಾಗೂ ನನ್ನೊಂದಿಗೆ ಬರುವ ನಾಯಕರಿಗೆ ಕಾಶ್ಮೀರಲ್ಲಿ ಓಡಾಡುವ, ಜನಸಾಮಾನ್ಯರಿಗೆ ಭೇಟಿಯಾಗುವ ಹಾಗೂ ಯೋಧರನ್ನು ಭೇಟಿ ಮಾಡುವ ಸ್ವಾತಂತ್ರ್ಯ ನೀಡಿದರೆ ಸಾಕು ಎಂದಿದ್ದಾರೆ.
ವರುಣನ ಅಬ್ಬರಕ್ಕೆ ಕರುನಾಡು ತತ್ತರ: ಮಳೆಗೆ ಸಂಬಂಧಿಸಿದ ಎಲ್ಲಾ ಸುದ್ದಿಗಳಿಗಾಗಿ ಕ್ಲಿಕ್ಕಿಸಿ
ಈ ಕುರಿತಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ 'ಜಮ್ಮು ಹಾಗೂ ಕಾಶ್ಮೀರದ ಪ್ರಿಯ ರಾಜ್ಯಪಾಲ ಮಲಿಕ್, ನಾನು ಹಾಗೂ ವಿಪಕ್ಷ ನಾಯಕರು ಜಮ್ಮು ಕಾಶ್ಮೀರ ಹಾಗೂ ಲಡಾಖ್ ಗೆ ಭೇಟಿ ನೀಡಲು ನೀವು ನೀಡಿದ ಆಮಂತ್ರಣವನ್ನು ಖುಷಿಯಿಂದ ಸ್ವೀಕರಿಸುತ್ತೇವೆ. ನಮಗೆ ನೀವು ಹೆಲಿಕಾಪ್ಟರ್ ನೀಡಬೇಕಿಲ್ಲ. ಆದರೆ ಅಲ್ಲಿ ಓಡಾಡಲು, ಜನಸಾಮಾನ್ಯರನ್ನು ಹಾಗೂ ಅಲ್ಲಿರುವ ಯೋಧರನ್ನು ಭೇಟಿಯಾಗುವ ಸ್ವಾತಂತ್ರ್ಯ ನೀಡಿ' ಎಂದಿದ್ದಾರೆ.
ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ರಾಹುಲ್ ಗಾಂಧಿ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಲವಾರು ಹೇಳಿಕೆಗಳನ್ನು ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯಪಾಲ ಸತ್ಯಪಾಲ ಮಲಿಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷನಿಗೆ ಜಮ್ಮು ಕಾಶ್ಮೀರಕ್ಕೆ ಪ್ರವಾಸ ಮಾಡುವಂತೆ ಆಪರ್ ನೀಡಿದ್ದರು. ಅಲ್ಲದೇ ಹೆಲಿಕಾಪ್ಟರ್ ಆಯೋಜಿಸುವುದಾಗಿಯೂ ತಿಳಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.