
ನವದೆಹಲಿ(ಡಿ.16): ಎಐಸಿಸಿ 49ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿ ತಮ್ಮ ಪಟ್ಟಾಭಿಷೇಕದ ಕಾರ್ಯಕ್ರಮದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ನೂತನ ಸಾರಥಿ ರಾಹುಲ್ ಎಲ್ಲಾ ಭಾರತೀಯರಿಗೂ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ಹೇಳಿದ್ದಾರೆ.
ಅಲ್ಲದೇ ಇದೇ ವೇಳೆ ರಾಹುಲ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಗಲಭೆಗಳು ಹೆಚ್ಚಾಗುತ್ತಿವೆ, ಇದೊಂದು ನಾಚಿಕೆಗೇಡಿನ ಸಂಗತಿ. ದೇಶದಲ್ಲಿ ಜನರನ್ನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ.
ನನ್ನ ಕುರಿತ ವೈಯಕ್ತಿಕ ದಾಳಿ ನನ್ನನ್ನು ಮತ್ತಷ್ಟು ಗಟ್ಟಿಯಾಗಿಸಿದೆ, ವಿರೋಧಿಗಳು ನನ್ನನ್ನು ದ್ವೇಷಿಸಿದಷ್ಟು ನಾನು ಅವರನ್ನು ಪ್ರೀತಿಸುತ್ತೇನೆ ಎಂದಿದ್ದಾರೆ. ನಮ್ಮದು ಅತ್ಯಂತ ಹಳೆಯ ಪಕ್ಷವಾಗಿದ್ದು, ಅದರ ನಿರ್ಮೂಲನೆ ಎಂದಿಗೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.