ರಾಹುಲ್ ಗೆ ತಲೆನೋವಾದ ಕಾಂಗ್ರೆಸ್‌ ಕಲಹ ; ಪರಂ, ಡಿಕೆಶಿ ಬಗ್ಗೆ ಸಿದ್ದು ಬೇಸರ

Published : Sep 04, 2018, 05:49 PM ISTUpdated : Sep 09, 2018, 09:13 PM IST
ರಾಹುಲ್ ಗೆ ತಲೆನೋವಾದ  ಕಾಂಗ್ರೆಸ್‌ ಕಲಹ ; ಪರಂ, ಡಿಕೆಶಿ ಬಗ್ಗೆ ಸಿದ್ದು ಬೇಸರ

ಸಾರಾಂಶ

 ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್ ಅವರು ದೇವೇಗೌಡರ ಎದುರು ಪೂರ್ತಿ ಶರಣಾಗಿದ್ದಾರೆ ಎಂದು ಕೂಡ ಸಿದ್ದು ಹೇಳಿಕೊಂಡಿದ್ದಾರಂತೆ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅನಾಯಾಸವಾಗಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇರುವ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಗಲು ಅಶೋಕ್ ಗೆಹ್ಲೋಟ್ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ನಡುವೆ ಪೈಪೋಟಿ ನಡೆದಿದ್ದು, ಇದು ರಾಹುಲ್‌ಗೂ ದೊಡ್ಡ ತಲೆನೋವು ತಂದಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ 2 ಗುಂಪುಗಳ ನಡುವೆ ಮಾರಾಮಾರಿ ಸ್ಥಿತಿ ಏರ್ಪಟ್ಟಿರುವುದರಿಂದ ನಿಧಾನವಾಗಿ ವಸುಂಧರಾ ಚೇತರಿಕೆ ಕಾಣುತ್ತಿರುವುದು ಕಾಂಗ್ರೆಸ್‌ನವರೇ ಮಾಡಿಸಿದ ಸರ್ವೇಗಳಲ್ಲಿ ಕಾಣುತ್ತಿದೆ. ಮಾನಸ ಸರೋವರದಿಂದ ಹಿಂತಿರುಗಿದ ನಂತರ ರಾಹುಲ್ ರಾಜಸ್ಥಾನದ ಬಗ್ಗೆ ಒಂದು ನಿರ್ಣಯ ತೆಗೆದುಕೊಳ್ಳಬಹುದು.

ಪರಂ, ಡಿಕೆಶಿ ಬಗ್ಗೆ ಏನು ಬೇಸರ?
ಸಿದ್ದು ದಿಲ್ಲಿ ನಾಯಕರ ಎದುರು ಹೇಳಿಕೊಂಡಿರುವ ಪ್ರಕಾರ ನಿಧಾನವಾಗಿ ದೇವೇಗೌಡರ ಕುಟುಂಬದ ಆಡಳಿತ ‘ಒಕ್ಕಲಿಗರ ಸರ್ಕಾರ’ ಎಂದು ಜನ ಮಾತನಾಡಿಕೊಳ್ಳುವಂತಾಗಿದ್ದು, ನಾವು ಕಾಂಗ್ರೆಸ್ಸಿಗರು ಸ್ವಲ್ಪವೂ ಪ್ರತಿರೋಧ ತೋರದೇ ಇದ್ದರೆ ಹಿಂದುಳಿದ ವರ್ಗಗಳು ಬಿಜೆಪಿಯತ್ತ ವಾಲಬಹುದು. ಸರ್ಕಾರದಲ್ಲಿದ್ದರೂ ಕೂಡ ಅವಶ್ಯಕತೆ ಇದ್ದಲ್ಲಿ ಧ್ವನಿ ಎತ್ತಬೇಕು. ಆಗ ನಮ್ಮ ಕಾರ್ಯಕರ್ತರು, ಮತದಾರರು ಸಕ್ರಿಯರಾಗಿರುತ್ತಾರೆ. ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್ ಅವರು ದೇವೇಗೌಡರ ಎದುರು ಪೂರ್ತಿ ಶರಣಾಗಿದ್ದಾರೆ ಎಂದು ಕೂಡ ಸಿದ್ದು ಹೇಳಿಕೊಂಡಿದ್ದಾರೆ.

(ಪ್ರಶಾಂತ್ ನಾತು ಅವರ ಇಂಡಿಯಾ ಗೇಟ್ ಅಂಕಣದ ಆಯ್ದ ಭಾಗ)

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!