ಕಾಂಗ್ರೆಸ್ ಅಧ್ಯಕ್ಷರಾಗಿ ಇಂದು ರಾಹುಲ್ ಗಾಂಧಿ ಆಯ್ಕೆ..?

Published : Dec 04, 2017, 08:05 AM ISTUpdated : Apr 11, 2018, 12:54 PM IST
ಕಾಂಗ್ರೆಸ್ ಅಧ್ಯಕ್ಷರಾಗಿ ಇಂದು ರಾಹುಲ್ ಗಾಂಧಿ ಆಯ್ಕೆ..?

ಸಾರಾಂಶ

ನಾಮಪತ್ರ ಸಲ್ಲಿಕೆಗೆ ಸೋಮವಾರ (ಡಿ.4) ಕಡೆಯ ದಿನವಾಗಿದೆ. ಇದುವರೆಗೆ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿಲ್ಲ. ಇಂದು ಕೂಡಾ ರಾಹುಲ್ ಹೊರತು ಪಡಿಸಿ ಇನ್ಯಾವುದೇ ಸ್ಪರ್ಧಾಳುಗಳು ಕಣಕ್ಕೆ ಇಳಿಯದೇ ಹೋದಲ್ಲಿ, ಪಕ್ಷದ ನೂತನ ಅಧ್ಯಕ್ಷರಾಗಿ ರಾಹುಲ್ ಇಂದೇ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ನವದೆಹಲಿ(ಡಿ.04): ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಯ ಚುನಾವಣೆಗೆ ಅಭ್ಯರ್ಥಿಯಾಗಿ, ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಸೋಮವಾರ (ಡಿ.4) ಕಡೆಯ ದಿನವಾಗಿದೆ. ಇದುವರೆಗೆ ಯಾವುದೇ ಅಭ್ಯರ್ಥಿ ನಾಮಪತ್ರ ಸಲ್ಲಿಸಿಲ್ಲ. ಇಂದು ಕೂಡಾ ರಾಹುಲ್ ಹೊರತು ಪಡಿಸಿ ಇನ್ಯಾವುದೇ ಸ್ಪರ್ಧಾಳುಗಳು ಕಣಕ್ಕೆ ಇಳಿಯದೇ ಹೋದಲ್ಲಿ, ಪಕ್ಷದ ನೂತನ ಅಧ್ಯಕ್ಷರಾಗಿ ರಾಹುಲ್ ಇಂದೇ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಆದರೆ ಈ ಕುರಿತ ಅಧಿಕೃತ ಘೋಷಣೆ ಡಿ.19ರಂದಷ್ಟೇ ಹೊರಬೀಳಲಿದೆ.

ಇದರೊಂದಿಗೆ ಸೋನಿಯಾ ಗಾಂಧಿ ಉತ್ತರಾಧಿಕಾರಿಯಾಗಿ ರಾಹುಲ್ ಪಟ್ಟಕ್ಕೇರುವುದಕ್ಕೆ ವೇದಿಕೆ ಸಿದ್ಧಗೊಂಡಿದೆ. ರಾಹುಲ್ ಗಾಂಧಿ ಅವರು 70 ಮಂದಿ ಸೂಚಕರ ಬೆಂಬಲದೊಂದಿಗೆ ಇಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಈ ವೇಳೆ ಹಾಲಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಸಿಎಂಗಳು, ವಿವಿಧ ರಾಜ್ಯಗಳ ಕಾಂಗ್ರೆಸ್ ಮುಖ್ಯಸ್ಥರು ಮತ್ತು ಪಕ್ಷದ ಹಿರಿಯ ನಾಯಕರು ಉಪಸ್ಥಿತರಿರಲಿದ್ದಾರೆ.

ಡಿ.5ರಂದು ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಕ್ರಮಬದ್ಧವಾಗಿರುವ ನಾಮಪತ್ರಗಳ ಕುರಿತು ಅಂದೇ ಮಧ್ಯಾಹ್ನ 3.30ಕ್ಕೆ ಪ್ರಕಟಣೆ ಹೊರಡಿಸಲಾಗುತ್ತದೆ. ಒಂದು ವೇಳೆ ರಾಹುಲ್ ಹೊರತಾಗಿ ಇನ್ಯಾವುದೇ ಅಭ್ಯರ್ಥಿ ಕಣಕ್ಕಿಳಿದಲ್ಲಿ ಡಿ.16ರಂದು ಚುನಾವಣೆ ನಡೆಯಲಿದ್ದು, ಡಿ.19ರಂದು ಮತ ಎಣಿಕೆ ನಡೆಸಿ, ಅಂದೇ ಫಲಿತಾಂಶ ಪ್ರಕಟಿಸಲಾಗುವುದು. 2013ರ ಜ.19ರಂದು ರಾಹುಲ್ ಉಪಾಧ್ಯಕ್ಷರಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking News: ಬೆಳಗಾವಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ; ಬಿಎಲ್ ಸಂತೋಷ್, ವಿಜಯೇಂದ್ರ ನೇತೃತ್ವದಲ್ಲಿ ಚುನಾವಣಾ ತಂತ್ರ!
ಬೀಚ್‌ನಲ್ಲಿ ಹೊಸ ವರ್ಷ ಆಚರಿಸುವವರಿಗೆ ವಾರ್ನಿಂಗ್, ಡಿ.31ರ ಸಂಜೆ 6ರ ಬಳಿಕ ಸಮುದ್ರಕ್ಕಿಳಿಯುವಂತಿಲ್ಲ