
ನಾರ್ವೆಯ ವಿದೇಶಾಂಗ ಇಲಾಖೆಯ ಆಹ್ವಾನದ ಮೇರೆಗೆ ರಾಹುಲ್ ಗಾಂಧಿ ಇಂದು ನಾರ್ವೆಗೆ ತೆರಳುತ್ತಿದ್ದಾರೆ.
ನಾರ್ವೆ ರಾಜಧಾನಿ ಓಸ್ಲೋ ನಗರದಲ್ಲಿ ರಾಜಕೀಯ ನಾಯಕರು ಹಾಗೂ ಉದ್ಯಮಿಗಳೊಂದಿಗೆ ಸಂವಾದ ಕೂಟದಲ್ಲಿ ಅವರು ಭಾಗವಹಿಸಲಿದ್ದಾರೆ.
ಲಾಲೂ ಯಾದವ್ ಭಾನುವಾರ (ಆ.27ರಂದು) ಪಾಟ್ನಾದಲ್ಲಿ ‘ಬಿಜೆಪಿ ಭಗಾವೋ, ದೇಶ್ ಬಚಾವೋ’ (ಬಿಜೆಪಿಯನ್ನು ಅಟ್ಟಿಸಿ, ದೇಶವನ್ನು ಉಳಿಸಿ) ಎಂಬ ಬೃಹತ್ ರ್ಯಾಲಿಯನ್ನು ಆಯೋಜಿಸಿದ್ದು, ಕಾಂಗ್ರೆಸ್, ಬಿಎಸ್ಪಿ ಮುಂತಾದ ಪಕ್ಷದ ನಾಯಕರಿಗೆ ಆಹ್ವಾನ ನೀಡಲಾಗಿತ್ತು.
ಪ್ರತಿಪಕ್ಷಗಳ ನಡುವೆ ಸೀಟು ಹಂಚಿಕೆಗೆ ಸಂಬಂಧಿಸಿ ಸ್ಪಷ್ಟತೆ ಉಂಟಾಗುವವರೆಗೂ ತಾನು ಅಂತಹ ಸಭೆಗಳಲ್ಲಿ ಭಾಗವಹಿಸುವುದಿಲ್ಲವೆಂದು ಬಿಎಸ್ಪಿ ನಾಯಕಿ ಮಾಯಾವತಿ ಈ ಹಿಂದೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.