
ಮುಂಬೈ: ಶಿವಸೇನೆಯು ಎನ್ಡಿಎನಿಂದ ಮಾನಸಿಕ ವಾಗಿ ದೂರವಾಗುತ್ತಿರುವ ಲಕ್ಷಣಗಳು ಕಾಣುತ್ತಿರು ವಂತೆಯೇ, ಸೇನಾ ಅಧ್ಯಕ್ಷ ಉದ್ಧವ್ ಠಾಕ್ರೆ ಅವರ 58 ನೇ ಹುಟ್ಟುಹಬ್ಬಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶುಭ ಹಾರೈಸಿರುವುದು ರಾಜಕೀಯ ವಲಯದಲ್ಲಿ ಹುಬ್ಬೇರುವಂತೆ ಮಾಡಿದೆ.
‘ಶ್ರೀ ಉದ್ಧವ್ ಠಾಕ್ರೆ ಅವರ ಜನ್ಮದಿವಸಕ್ಕೆ ಶುಭೇಚ್ಛೆಗಳು. ಅವರಿಗೆ ದೇವರು ಉತ್ತಮ ಆಯುರಾರೋಗ್ಯ, ಸಂತಸ ದಯಪಾಲಿಸಲಿ’ ಎಂದು ರಾಹುಲ್ ಗಾಂಧಿ ಅವರು ಶುಕ್ರವಾರ ಮುಂಜಾನೆ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೂ ಠಾಕ್ರೆ ಅವರ ಜನ್ಮದಿನಕ್ಕೆ ಶುಭ ಹಾರೈಸಿದ್ದಾರೆ. ‘ದೇವರು ಉದ್ಧವ್ಜಿಗೆ ಸಮಾಜಸೇವೆ ಮಾಡಲು ಉತ್ತಮ ಆಯುರಾರೋಗ್ಯ ದಯಪಾಲಿಸಲಿ’ ಎಂದು ದಕ್ಷಿಣ ಆಫ್ರಿಕಾ ಪ್ರವಾಸದಿಂದಲೇ ಮೋದಿ ಶುಭೇಚ್ಛೆಗಳನ್ನು ತಿಳಿಸಿದ್ದಾರೆ. ಇತ್ತೀಚೆಗೆ ಶಿವಸೇನೆ ಹಾಗೂ ಬಿಜೆಪಿ ನಡುವೆ ಸಂಬಂಧ ಹಳಸಿದ್ದು, ರಾಹುಲ್ ಅವರ ಶುಭ ಹಾರೈಕೆಗೆ ಮಹತ್ವ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.