
ಅಲ್ಮೋರಾ, ಉತ್ತರಾಖಂಡ (ಡಿ.23): ನೋಟು ಅಮಾನ್ಯ ಕ್ರಮದ ವಿರುದ್ಧ ವಾಗ್ದಾಳಿಯನ್ನು ಮುಂದುವೆರಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಅತೀ- ಶ್ರೀಮಂತ 50 ಕುಟುಂಬಗಳಿಗೆ ಲಾಭ ಉಂಟುಮಾಡಲು ಮೋದಿ ಸರ್ಕಾರವು ದೇಶದ ಬಡಜನರನ್ನು ವಂಚಿಸುತ್ತಿದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷವು ದೇಶದಿಂದ ಭ್ರಷ್ಟಚಾರವನ್ನು ತೊಡೆದುಹಾಕಬಯಸುತ್ತದೆ. ಭ್ರಷ್ಟಾಚಾರದ ವಿರುದ್ಧ ಸರ್ಕಾರವು ಕೈಗೊಳ್ಳುವ ಎಲ್ಲಾ ಕ್ರಮಗಳನ್ನು ಪಕ್ಷವು ಬೆಂಬಲಿಸುತ್ತದೆ. ಆದರೆ ಸರ್ಕಾರದ ನೋಟು ಅಮಾನ್ಯ ಕ್ರಮವು ಕಾಳಧನ ಅಥವಾ ಭ್ರಷ್ಟಾಚಾರದ ವಿರುದ್ಧವಲ್ಲ, ಬದಲಾಗಿ ಆರ್ಥಿಕ ದರೋಡೆಯಾಗಿದೆ, ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನೋಟು ಅಮಾನ್ಯ ಕ್ರಮವು ಸರ್ಜಿಕಲ್ ದಾಳಿಯಲ್ಲ ಬದಲಾಗಿ, ಯದ್ವಾತದ್ವಾ ನಡೆಸಿರುವ ಬಾಂಬ್ ದಾಳಿಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಸರ್ಕಾರವು ದೇಶದ ಜನತೆಯನ್ನು 2 ಭಾಗಗಳಲ್ಲಿ ಹಂಚಿದೆ; ಒಂದು ಕಡೆ 50 ಮಂದಿ ಅತೀ-ಶ್ರೀಮಂತ ಕುಟುಂಬಗಳಿವೆ, ಇನ್ನೊಂದು ಕಡೆ ಬಡ, ಪ್ರಾಮಾಣಿಕ ಹಾಗೂ ಕಷ್ಟಪಟ್ಟು ದುಡಿಯುವ ಜನಸಾಮಾನ್ಯರಿದ್ದಾರೆ, ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಪ್ರಧಾನಿಯವರು ರೈತರ ಸಮಸ್ಯೆಗಳನ್ನು ಆಲಿಸುವುದಿಲ್ಲ, ಅವರ ಸಾಲವನ್ನು ಮನ್ನಾ ಮಾಡುವುದಿಲ್ಲ; ಆದರೆ 15 ಶ್ರೀಮಂತ ಮಂದಿಯ ಸುಮಾರು 1.40 ಲಕ್ಷ ಕೋಟಿ ಸಾಲವನ್ನು ಮನ್ನಾ ಮಾಡುತ್ತಾರೆ, ಎಂದು ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.