
ಕರ್ನಾಟಕದ ಬೆಳವಣಿಗೆಗೆ ಕೊಡುಗೆ ನೀಡಿದ ದಾರ್ಶನಿಕರ ಹೆಸರನ್ನು ಪ್ರಸ್ತಾಪಿಸುವಾಗ ರಾಹುಲ್ ಗಾಂಧಿ ಮತ್ತೊಮ್ಮೆ ಟಿಪ್ಪು ಸುಲ್ತಾನ್ ಹೆಸರು ಪ್ರಸ್ತಾಪಿಸಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು, ಅನೇಕ ದಾರ್ಶನಿಕರು ಕರ್ನಾಟಕ ನಾಡು ಕಟ್ಟುವಲ್ಲಿ ಕೊಡುಗೆ ನೀಡಿದ್ದಾರೆ. ಅವರ ಪೈಕಿ, ಟಿಪ್ಪು ಸುಲ್ತಾನ್, ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್.ಎಂ. ವಿಶ್ವೇಶ್ವರಯ್ಯ, ಕುವೆಂಪು ಅವರೂ ಸೇರಿದ್ದಾರೆ ಎಂದು ಸ್ಮರಿಸಿದರು.
ಎನ್ಸಿಸಿ ಗೊತ್ತಿಲ್ಲ ಎಂದ ರಾಹುಲ್!
ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಸಂವಾದ ವೇಳೆ ವಿದ್ಯಾರ್ಥಿನಿಯೊಬ್ಬಳು ಎನ್ಸಿಸಿ ಕುರಿತಾಗಿ ಕೇಳಿದ ಪ್ರಶ್ನೆಗೆ ಎನ್ಸಿಸಿ ತರಬೇತಿ ಬಗ್ಗೆ ತಮಗೆ ಗೊತ್ತಿಲ್ಲ ಎಂದು ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಟೀಕೆ-ಚರ್ಚೆಗೆ ಗುರಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.