
ಅಯೋಧ್ಯೆ (ಸೆ.09): ಉತ್ತರ ಪ್ರದೇಶದಲ್ಲಿ ಕಿಸಾನ್ ಯಾತ್ರೆ ಹಮ್ಮಿಕೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಯೋಧ್ಯೆಗೆ ಭೇಟಿ ನೀಡಿದ್ದಾರೆ. ಬಾಬ್ರಿ ಮಸೀದಿ ನೆಲಕ್ಕುರುಳಿದ 24 ವರ್ಷಗಳ ಬಳಿಕ ಗಾಂಧಿ ಕುಟುಂಬದ ವ್ಯಕ್ತಿಯೋರ್ವರು ಅಯೋಧ್ಯೆಗೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಸುಮಾರು 20 ನಿಮಿಷ ಅಯೋಧ್ಯೆಯಲ್ಲಿದ್ದ ರಾಹುಲ್ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಬಳಿಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ. ಆದರೆ ಇಲ್ಲಿಯ ಹನುಮಾನ್ ಗರ್ವಿ ದೇಗುಲದಲ್ಲಿ ರಾಹುಲ್ ವಿಶೇಷ ಪೂಜೆ ಸಲ್ಲಿಸಿದರು. ಆದರೆ ವಿವಾದಿತ ರಾಮಜನ್ಮಭೂಮಿ ಮತ್ತು ಬಾಬರಿ ಮಸೀದಿ ತಾಣದಿಂದ ದೂರ ಉಳಿದಿದ್ದಾರೆ. ಬಳಿಕ ಅಂಬೇಡ್ಕರ್ ನಗರದಲ್ಲಿರುವ ಕಿಚೌಚ ಶರೀಫ್ ದರ್ಗಾಗೆ ಭೇಟಿ ನೀಡಿ ಸಮತೋಲನ ಕಾಯ್ದುಕೊಳ್ಳಲು ಯತ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.