ಮಾರ್ಚ್ ಮೊದಲ ವಾರ ಅವಿಭಜಿತ ದಕ್ಷಿಣ ಕನ್ನಡಕ್ಕೆ ರಾಹುಲ್‌

Published : Feb 15, 2018, 09:02 AM ISTUpdated : Apr 11, 2018, 01:09 PM IST
ಮಾರ್ಚ್ ಮೊದಲ ವಾರ ಅವಿಭಜಿತ ದಕ್ಷಿಣ ಕನ್ನಡಕ್ಕೆ ರಾಹುಲ್‌

ಸಾರಾಂಶ

ಹೈದರಾಬಾದ್‌ ಕರ್ನಾಟಕದಲ್ಲಿ ಈಗಾಗಲೇ ಜನಾಶೀರ್ವಾದ ಯಾತ್ರೆಯನ್ನು ಮುಗಿಸಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮಾರ್ಚ್ ಮೊದಲ ವಾರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಮಂಗಳೂರು : ಹೈದರಾಬಾದ್‌ ಕರ್ನಾಟಕದಲ್ಲಿ ಈಗಾಗಲೇ ಜನಾಶೀರ್ವಾದ ಯಾತ್ರೆಯನ್ನು ಮುಗಿಸಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಮಾರ್ಚ್ ಮೊದಲ ವಾರದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚರಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ನಗರದಲ್ಲಿ ಬುಧವಾರ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್‌, 3-4 ದಿನಗಳ ಕಾಲ ಕರಾವಳಿಯಲ್ಲಿ ವಾಸ್ತವ್ಯ ಹೂಡಲಿರುವ ರಾಹುಲ್‌ ಗಾಂಧಿ ಅಲ್ಲಲ್ಲಿ ರೋಡ್‌ ಶೋ, ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಅವರು ಬಸ್ಸಿನಲ್ಲೇ ಪ್ರಯಾಣ ಮಾಡಲಿದ್ದು ಅಲ್ಲಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಲಿದ್ದಾರೆ.

ರಾಷ್ಟ್ರಮಟ್ಟದ, ರಾಜ್ಯಮಟ್ಟದ ಅನೇಕ ನಾಯಕರು ಈ ಸಂದರ್ಭ ಅವರ ಜೊತೆ ಸಂಚರಿಸಲಿದ್ದು ಅವರ ಭೇಟಿಯ ಸಂಪೂರ್ಣ ರೂಪುರೇಷೆ ಇನ್ನಷ್ಟೆನಿರ್ಧಾರವಾಗಬೇಕಿದೆ ಎಂದು ವೆಂಕಟೇಶ್‌ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಲವ್ ಮಾಡು, ಇಲ್ಲಾಂದ್ರೆ ಸಾಯ್ತೀನಿ: ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಕಿರುಕುಳ ಕೊಟ್ಟ ಖತರ್ನಾಕ್ ಲೇಡಿ
ಸರ್ಕಾರಿ ನೇಮಕಾತಿ ವಿಳಂಬ: ಮನನೊಂದು ಧಾರವಾಡ ರೈಲು ಹಳಿಗೆ ಸಿಲುಕಿ ಯುವತಿ ದಾರುಣ ಸಾವು!