ಮಹದಾಯಿ ಬಗ್ಗೆ ನಿಲುವು ಪ್ರಕಟಿಸುತ್ತಾರಾ ರಾಹುಲ್‌..?

Published : Feb 23, 2018, 08:23 AM ISTUpdated : Apr 11, 2018, 01:13 PM IST
ಮಹದಾಯಿ ಬಗ್ಗೆ ನಿಲುವು ಪ್ರಕಟಿಸುತ್ತಾರಾ ರಾಹುಲ್‌..?

ಸಾರಾಂಶ

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಫೆ.24ರಿಂದ ಕೈಗೊಳ್ಳಲಿರುವ ತಮ್ಮ ಎರಡನೇ ಹಂತದ ಜನಾಶೀರ್ವಾದ ಪ್ರವಾಸದ ವೇಳೆ ಮಹದಾಯಿ ವಿಚಾರದ ಬಗ್ಗೆ ತಮ್ಮ ನಿಲುವು ಪ್ರಕಟಪಡಿಸುವ ಸಾಧ್ಯತೆಯಿದೆ.

ಬೆಂಗಳೂರು : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಫೆ.24ರಿಂದ ಕೈಗೊಳ್ಳಲಿರುವ ತಮ್ಮ ಎರಡನೇ ಹಂತದ ಜನಾಶೀರ್ವಾದ ಪ್ರವಾಸದ ವೇಳೆ ಮಹದಾಯಿ ವಿಚಾರದ ಬಗ್ಗೆ ತಮ್ಮ ನಿಲುವು ಪ್ರಕಟಪಡಿಸುವ ಸಾಧ್ಯತೆಯಿದೆ.

ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆ​ಹ​ರಿ​ಸಲು ತನ್ನಿಂದ ಆಗು​ವು​ದಿಲ್ಲ ಎಂದು ಕಾಂಗ್ರೆಸ್‌ ಹೇಳಲಿ, ಅನಂತರ ಬಿಜೆಪಿ ಈ ವಿಚಾ​ರ​ದಲ್ಲಿ ಮಧ್ಯ​ಪ್ರ​ವೇ​ಶಿ​ಸು​ತ್ತದೆ ಎಂದು ಆ ಪಕ್ಷದ ಅಧ್ಯಕ್ಷ ಅಮಿತ್‌ ಶಾ ಸವಾಲು ಹಾಕಿದ ಬೆನ್ನಲ್ಲೇ ಗುರು​ವಾರ ಸುದ್ದಿ​ಗೋಷ್ಠಿ ನಡೆ​ಸಿದ ಕೆಪಿ​ಸಿಸಿ ಅಧ್ಯಕ್ಷ ಡಾ. ಜಿ. ಪರ​ಮೇ​ಶ್ವರ್‌ ಈ ಸುಳಿವು ನೀಡಿ​ದ​ರು.

‘ರಾಹುಲ್‌ ಗಾಂಧಿ ಫೆ. 24ರಿಂದ ಮೂರು ದಿನಗಳ ಕಾಲ ಮುಂಬೈ ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುವರು. ಈ ಪ್ರವಾಸದ ವೇಳೆ ಅವರು ಮಹದಾಯಿ ವಿಚಾರದಲ್ಲಿ ತಮ್ಮ ನಿಲುವು ಪ್ರಕಟಪಡಿಸುವ ಸಾಧ್ಯತೆಯೂ ಇದೆ’ ಎಂದು ಅವರು ಹೇಳಿ​ದ​ರು. ರಾಹುಲ್‌ ರಾಜ್ಯ ಪ್ರವಾ​ಸದ ವೇಳೆ ಹುಬ್ಬಳ್ಳಿ, ಬೆಳಗಾವಿ ಭೇಟಿ ವೇಳೆ ಮುತ್ತಿಗೆ ಹಾಕಿ ಮನವಿ ಪತ್ರ ಸಲ್ಲಿಸುವುದಾಗಿ ಮಹಾ​ದಾಯಿ ಹೋರಾ​ಟ​ಗಾ​ರರು ಬುಧವಾರ ಹೇಳಿದ್ದರು. ಈ ನಡುವೆ ಬಿಜೆಪಿ ಅಧ್ಯ​ಕ್ಷರು ಕೂಡ ಕಾಂಗ್ರೆಸ್‌ಗೆ ಸವಾಲು ಹಾಕಿ​ದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಧಿಕಾರ ಶಾಶ್ವತವಲ್ಲ: ಸಿಎಂ ಬದಲಾವಣೆ ಬಗ್ಗೆ ಮೌನ ಮುರಿದ ಯತೀಂದ್ರ ! ಡಿಕೆಶಿ ಹೇಳಿಕೆಗೆ ನೀಡಿದ ಉತ್ತರವೇನು?
ಮುಳ್ಳಯ್ಯನಗಿರಿ ಬಳಿ ಪ್ರವಾಸಿಗರ ಜೀಪ್ ಪಲ್ಟಿ, ಪುತ್ತೂರಿನ 7 ಮಂದಿಗೆ ಗಾಯ