
ರಾಯಚೂರು (ಮಾ. 08): ಬಿಜೆಪಿ ಹಾಗೂ ಕೇಂದ್ರ ಸರ್ಕಾರದವರು ಡೋಂಗಿ ಹಿಂದುತ್ವವಾದಿಗಳು. ಯೋಗಿ ಬರಲಿ, ಮೋದಿ ಬರಲಿ ರಾಜ್ಯದಲ್ಲಿ ಶಿವಸೇನೆಯನ್ನು ಬೆಂಬಲಿಸುತ್ತಾರೆ. ಹಿಂದುತ್ವಕ್ಕಾಗಿ ದುಡಿದವರನ್ನು ಬಿಜೆಪಿ ಮೂಲೆಗುಂಪು ಮಾಡಿದೆ ಎಂದು ರಾಯಚೂರಿನಲ್ಲಿ ಆಂದೋಲ ಮಠದ ಸಿದ್ದಲಿಂಗ ಸ್ವಾಮೀಜಿ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಹಿಂದುಗಳ ಬಗ್ಗೆ ಗೌರವ ಇದ್ದಿದ್ರೆ ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದರು. ಮಂದಿರ್ ಬನಾಯೆಂಗೇ ಮಂದಿರ್ ಬನಾಯೆಂಗೇ ಮಾತ್ರ ಎನ್ನುತ್ತಿದ್ದಾರೆ ಆದರೆ ಅದನ್ನು ಕಾರ್ಯ ರೂಪಕ್ಕೆ ಮಾತ್ರ ತರುತ್ತಿಲ್ಲ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಬಾಂಗ್ ಕೂಗಿದ ತಕ್ಷಣ ಭಾಷಣ ನಿಲ್ಲಿಸಿದರು. ಆಗ ಬಿಜೆಪಿಯ ಬಾಲ ಬಾಲಬಡಕರು ಸಿಎಂ ಸಿದ್ದರಾಮಯ್ಯನ್ನು ಟೀಕೆ ಮಾಡಿದ್ರು. ಪ್ರಧಾನಿ ನರೇಂದ್ರ ಮೋದಿ ಕೂಡ ಬಾಂಗ್ ಕೇಳಿ ಭಾಷಣ ನಿಲ್ಲಿಸಿದ್ದರು. ಆಗ ಭಕ್ತರು ಪ್ರಧಾನಿಯಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ ಎಂದರು. ಬಿಜೆಪಿಯವರು ಡೋಂಗಿ ಎನ್ನಲು ಇದೇ ಸಾಕ್ಷಿ. ಭ್ರಷ್ಟಾಚಾರದ ಕರಾಳ ಮುಖಕ್ಕೆ ಕೇಸರಿ ಬಣ್ಣ ಹಚ್ಚಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.