ರೈಲ್ವೆ ಎಂಜಿನ್'ಗೆ ಕಾರು ಡಿಕ್ಕಿ: ಇಬ್ಬರ ದುರ್ಮರಣ

Published : Feb 08, 2017, 07:51 AM ISTUpdated : Apr 11, 2018, 01:13 PM IST
ರೈಲ್ವೆ ಎಂಜಿನ್'ಗೆ ಕಾರು ಡಿಕ್ಕಿ: ಇಬ್ಬರ ದುರ್ಮರಣ

ಸಾರಾಂಶ

ಕಾರಿನಲ್ಲಿ ಜೋರಾಗಿ ಮ್ಯೂಸಿಕ್ ಹಾಕಿದ್ದರಿಂದ ಎಂಜಿನ್ ಬರುತ್ತಿರುವುದು ಅರಿವಿಗೆ ಬಂದಿರಲಿಲ್ಲ ಎನ್ನಲಾಗಿದೆ.

ಹಾಸನ(ಫೆ.08): ರೈಲ್ವೆ ಗೇಟ್ ಇಲ್ಲದ ಸ್ಥಳದಲ್ಲಿ ಹಳಿ ದಾಟುತ್ತಿದ್ದಾಗ ರೈಲ್ವೆ ಎಂಜಿನ್‌'ವೊಂದಕ್ಕೆ ಸ್ಕಾರ್ಪಿಯೊ ಕಾರೊಂದು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಅರಸೀಕೆರೆ ತಾಲೂಕಿನ ಬಾಗೇಶಪುರ ಸಮೀಪದ ಸಿದ್ದಾಪುರ ಗೇಟ್ ಬಳಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.

ದುದ್ದ ಗ್ರಾಮದ ಬಿಕಾಂ ವಿದ್ಯಾರ್ಥಿ ಆನಂದ್ (22) ಮತ್ತು ಟ್ಯಾಂಕರ್ ಚಾಲಕ ರಾಘವೇಂದ್ರ(28) ಮೃತರು. ಇವರು ಕಟ್ಟೆಪುರ ಗ್ರಾಮದಲ್ಲಿ ನಡೆದ ಗ್ರಾಮದ ದೇವರ ಹಬ್ಬ ಮುಗಿಸಿಕೊಂಡು ಕಾರಿನಲ್ಲಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿ ಜೋರಾಗಿ ಮ್ಯೂಸಿಕ್ ಹಾಕಿದ್ದರಿಂದ ಎಂಜಿನ್ ಬರುತ್ತಿರುವುದು ಅರಿವಿಗೆ ಬಂದಿರಲಿಲ್ಲ ಎನ್ನಲಾಗಿದೆ.

ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು