
ಹುಬ್ಬಳ್ಳಿ(ನ.20): ಮುಂಬರುವ ಕ್ರಿಸ್ಮಸ್, ಹೊಸ ವರ್ಷ ಹಾಗೂ ಸಂಕ್ರಾಂತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕಾಗಿ ಯಶವಂತಪುರ ಮತ್ತು ಪಂಢರಾಪುರ ಮಧ್ಯೆ ವೀಕ್ಲಿ ತತ್ಕಾಲ್ ಸ್ಪೆಷಲ್ ಎಕ್ಸ್ಪ್ರೆಸ್ ರೈಲು ಸಂಚಾರ ಪ್ರಾರಂಭಿಸಲು ನೈಋತ್ಯ ರೈಲ್ವೆ ವಲಯ ನಿರ್ಧರಿಸಿದೆ. ಈ ರೈಲು (06541) ಡಿ.22ರಿಂದ 2017ರ ಜ.19ರವರೆಗೆ ಪ್ರತಿ ಗುರುವಾರ ಸಂಜೆ 6 ಗಂಟೆಗೆ ಯಶವಂತಪುರ ನಿಲ್ದಾಣದಿಂದ ಹೊರಟು, ಶುಕ್ರವಾರ ಬೆಳಗ್ಗೆ 11.35ಕ್ಕೆ ಪಂಢರಾಪುರ ನಿಲ್ದಾಣ ತಲುಪಲಿದೆ. ಪಂಢರಾಪುರ-ಯಶವಂತಪುರ ತತ್ಕಾಲ್ ಸ್ಪೆಷಲ್ ಎಕ್ಸಪ್ರೆಸ್ ರೈಲು (06542) ಡಿ.23ರಿಂದ 2017ರ ಜ.20ರ ವರೆಗೆ ಪ್ರತಿ ಶುಕ್ರವಾರ ಮಧ್ಯಾಹ್ನ 1.35ಕ್ಕೆ ಪಂಢರಾಪುರ ನಿಲ್ದಾಣದಿಂದ ಹೊರಟು ಶನಿವಾರ ಬೆಳಗ್ಗೆ 6.20ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.