
ಬೆಂಗಳೂರು(ಮಾ.26): ಬೆಂಗಳೂರು-ಹಾಸನ ರೈಲು ಮಾರ್ಗ ಚಾಲನೆಗೆ ಯಮಗಂಡ ಕಾಲ ಅಡ್ಡಿಯಾಗಿದೆ. ಯಮಗಂಡ ಕಾಲದಲ್ಲಿ ಯೋಜನೆಗೆ ಚಾಲನೆ ಸಿಗದಂತೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಪಟ್ಟು ಹಿಡಿದ ಕಾರಣ ಒಂದು ಗಂಟೆ ಮುಂಚಿತವಾಗಿ ಕಾರ್ಯಕ್ರಮ ಆರಂಭವಾಗಲಿದೆ.
ಉದ್ಘಾಟನಾ ಕಾರ್ಯಕ್ರಮ 12.30ಕ್ಕೆ ನಿಗದಿಯಾಗಿತ್ತು. ಆದರೆ ಆ ಸಮಯದಲ್ಲಿ ಯಮಗಂಡಕಾಲ ಆರಂಭವಾಗುತ್ತದೆ. ಈ ವೇಳೆಯಲ್ಲಿ ಸಮಾರಂಭ ಆರಂಭಿಸದೆ 10.30 ಕ್ಕೆ ಕಾರ್ಯಕ್ರಮ ಆರಂಭಿಸುವಂತೆ ರೇವಣ್ಣ ಪಟ್ಟು ಹಿಡಿದರು. ಜೆಡಿಎಸ್ ನಾಯಕನ ಮಾತಿನಿಂದ ಕೆಲ ಕಾಲ ರೈಲ್ವೇ ಅಧಿಕಾರಿಗಳು ಕಂಗಾಲಾದರು ಅಂತಿಮವಾಗಿ ಮಾಜಿ ಪ್ರಧಾನಿ ದೇವೇಗೌಡ ಅವರು ಮಧ್ಯಪ್ರವೇಶದಿಂದ ಸಮಸ್ಯೆ ಪರಿಹಾರವಾಗಿ ಕಾರ್ಯಕ್ರಮವನ್ನು 11.30ಕ್ಕೆ ಬದಲಾವಣೆ ಮಾಡಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.