
ನವದೆಹಲಿ: ದೇಶದಲ್ಲೇ ಅತಿಹೆಚ್ಚು ಜನರಿಗೆ ಉದ್ಯೋಗ ಒದಗಿಸುವ ಭಾರತೀಯ ರೈಲ್ವೆಯ 13 ಲಕ್ಷ ಸಿಬ್ಬಂದಿ ಪೈಕಿ 13 ಸಾವಿರಕ್ಕೂ ಹೆಚ್ಚು ನೌಕರರು ಅನಧಿಕೃತವಾಗಿ ದೀರ್ಘಾವಧಿ ರಜೆಯಲ್ಲಿದ್ದಾರೆ ಎಂಬ ವಿಷಯ ಬೆಳಕಿಗೆ ಬಂದಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಇಂಥ ಸಿಬ್ಬಂದಿಗಳನ್ನು ಹುದ್ದೆಯಿಂದಲೇ ತೆಗೆದುಹಾಕುವ ನಿರ್ಧಾರಕ್ಕೆ ಬಂದಿದೆ.
ಇಲಾಖೆಯ ಕಾರ್ಯವೈಖರಿಯನ್ನು ಮತ್ತಷ್ಟುಉತ್ತಮಗೊಳಿಸುವ ನಿಟ್ಟಿನಲ್ಲಿ ನೌಕರರು ಶ್ರದ್ಧೆ, ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆಯೇ ಎಂಬುದರ ಪತ್ತೆಗಾಗಿ ರೈಲ್ವೆ ಇಲಾಖೆ ಕಾರ್ಯಾಚರಣೆ ಕೈಗೊಂಡಿತ್ತು. ಇದರ ಭಾಗವಾಗಿ ದೀರ್ಘಾವಧಿ ರಜೆಯಲ್ಲಿರುವ ನೌಕರರನ್ನು ಸೇವೆಯಿಂದ ಕೈಬಿಡಲಾಗುತ್ತದೆ ಎಂದು ಎಚ್ಚರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.