
ನವದೆಹಲಿ : ಭಾರತೀಯ ರೈಲ್ವೆ ಇಲಾಖೆ ಬಗ್ಗೆ ನೀವೀಗ ಹೆಮ್ಮೆ ಪಡುವ ವಿಚಾರ ಒಂದು ಇಲ್ಲಿದೆ. ನೀವು ಜನ್ ಭಾಗಿದಾರಿ ಕಾರ್ಯಕ್ರಮದಲ್ಲಿ ಭಾಗಿಯಾದಲ್ಲಿ ನಿಮಗೆ 10 ಲಕ್ಷ ಬಹುಮಾನ ಮೊತ್ತ ಸಿಗಲಿದೆ.
ಭಾರತೀಯ ರೈಲ್ವೆ ಇಲಾಖೆ ಸಾರ್ವಜನಿಕರಿಗೆ ಇದೀಗ ಒಂದು ಹೊಸ ಸ್ಪರ್ಧೆಯೊಂದನ್ನು ನೀಡಿದೆ. ಈ ಸ್ಪರ್ಧೆಯಲ್ಲಿ ಪ್ರಶ್ನೆಯೊಂದನ್ನು ಕೇಳಲಾಗಿದೆ. ಜನರಿಗೆ ಉತ್ತಮ ಸೇವೆಯನ್ನು ಒದಗಿಸಲು ರೈಲ್ವೆ ಇಲಾಖೆಯು ಹೆಚ್ಚು ಹಣವನ್ನು ಗಳಿಕೆ ಮಾಡುವುದು ಹೇಗೆ ಎಂದು ಪ್ರಶ್ನೆ ಕೇಳಲಾಗಿದೆ.
ಜನ ಭಾಗಿದಾರಿ ಕಾರ್ಯಕ್ರಮದ ಮೂಲಕ ಜನರು ಇಲ್ಲಿ ತಮ್ಮ ಐಡಿಯಾಗಳನ್ನು ರೈಲ್ವೆ ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು. ಜನರು ತಮ್ಮ ಐಡಿಯಾಗಳನ್ನು ಹಂಚಿಕೊಂಡಿದ್ದಕ್ಕೆ ರೈಲ್ವೆ ಇಲಾಖೆ 10 ಲಕ್ಷದವರೆಗೂ ಬಹುಮಾನವನ್ನು ನೀಡುತ್ತಿದೆ. ಸೂಕ್ತ ಉತ್ತರಕ್ಕೆ ರೈಲ್ವೆ ಇಲಾಖೆ 10 ಲಕ್ಷ ಬಹುಮಾನವನ್ನು ನೀಡುತ್ತದೆ.
ಆನ್ ಲೈನ್ ಮೂಲಕ ಸ್ಪರ್ಧೆಯನ್ನು ಏರ್ಪಡಿಸಿದ್ದು, ಮೈ ಗವರ್ನಮೆಂಟ್ App ನಲ್ಲಿ ನಿಮ್ಮ ಐಡಿಯಾಗಳನ್ನು ನೀಡಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.