ಭಾರತದಲ್ಲಿ ಅನಾಹುತ ಸೃಷ್ಟಿಸುತ್ತಿದೆ ಧೂಳಿನ ಬಿರುಗಾಳಿ : 106 ಸಾವು

Published : May 04, 2018, 10:19 AM IST
ಭಾರತದಲ್ಲಿ ಅನಾಹುತ ಸೃಷ್ಟಿಸುತ್ತಿದೆ ಧೂಳಿನ ಬಿರುಗಾಳಿ : 106 ಸಾವು

ಸಾರಾಂಶ

ಉತ್ತರ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ರಾತ್ರೋರಾತ್ರಿ ದಿಢೀರನೆ ಎದ್ದ ಧೂಳಿನ ಬಿರುಗಾಳಿಗೆ 106 ಮಂದಿ ಸಾವನ್ನಪ್ಪಿ, 200 ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಧೂಳಿನಚಕ್ರವಾತದ ನಂತರ ಸುರಿದ ಭಾರಿ ಗುಡುಗು  ಮಳೆಯಿಂದ ಅಪಾರ ಆಸ್ತಿಪಾಸ್ತಿಗೆ ಹಾನಿಯಾಗಿದೆ. 

ಲಖನೌ/ ಜೈಪುರ: ಉತ್ತರ ಪ್ರದೇಶ ಹಾಗೂ ರಾಜಸ್ಥಾನದಲ್ಲಿ ರಾತ್ರೋರಾತ್ರಿ ದಿಢೀರನೆ ಎದ್ದ ಧೂಳಿನ ಬಿರುಗಾಳಿಗೆ 106 ಮಂದಿ ಸಾವನ್ನಪ್ಪಿ, 200 ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಧೂಳಿನಚಕ್ರವಾತದ ನಂತರ ಸುರಿದ ಭಾರಿ ಗುಡುಗು ಮಳೆಯಿಂದ ಅಪಾರ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಬುಧವಾರ ತಡರಾತ್ರಿಯ ನಂತರ ಉತ್ತರ ಪ್ರದೇಶದ 17 ಜಿಲ್ಲೆಗಳಲ್ಲಿ ಹಾಗೂ ರಾಜಸ್ಥಾನದ 3 ಜಿಲ್ಲೆಗಳಲ್ಲಿ ದಿಢೀರನೆ 100 ಕಿ.ಮೀ ವೇಗದಲ್ಲಿ ಧೂಳಿನ ಚಕ್ರವಾತ ಎದ್ದಿದೆ. ಈ ಗಾಳಿ ರಾತ್ರಿಯುದ್ದಕ್ಕೂ ಬೀಸಿದ್ದು, ನಂತರ ಬೆಳಗಿನ ಜಾವದಲ್ಲಿ ಭಾರಿ ಗುಡುಗು ಮಳೆ ಸುರಿದಿದೆ. 

ಧೂಳುಗಾಳಿ ಹಾಗೂ ಮಳೆಯಿಂದಾಗಿ ಉತ್ತರ ಪ್ರದೇಶದಲ್ಲಿ 70 ಮಂದಿ ಹಾಗೂ ರಾಜಸ್ಥಾನದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರ ಸಂಖ್ಯೆ ಉತ್ತರ ಪ್ರದೇಶದಲ್ಲಿ 47 ಹಾಗೂ ರಾಜಸ್ಥಾನದಲ್ಲಿ 100 ಕ್ಕೂ ಹೆಚ್ಚು ಎಂದು ಹೇಳಲಾಗಿದೆ. ಸುಮಾರು 45 ನಿಮಿಷಗಳ ಕಾಲ ಬೀಸಿದ ಬಿರುಗಾಳಿಗೆ ಮನೆಗಳು ಉರುಳಿಬಿದ್ದಿವೆ. ಮರಗಳೆಲ್ಲಾ ನೆಲಕ್ಕರುಳಿವೆ. 

ಭಾರೀ ಪ್ರಮಾಣದಲ್ಲಿ ಫಸಲು ನೆಲಕಚ್ಚಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿರುವಾಗ ಈ ಅವಘಡ ಸಂಭವಿಸಿದೆ. ರಾಜ್ಯದಲ್ಲಿ ಅಪಾರ ಸಾವುನೋವು ಸಂಭವಿಸಿದ್ದರೂ ಮುಖ್ಯಮಂತ್ರಿಗಳು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. 

ಇನ್ನು, ಪ್ರಧಾನಿ ನರೇಂದ್ರ ಮೋದಿ ಅವರು ಉಭಯ ರಾಜ್ಯಗಳಲ್ಲಿ ಸಂಭವಿಸಿದ ಧೂಳಿನ ಬಿರುಗಾಳಿ ಹಾಗೂ ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದಿಂದ ಎರಡೂ ರಾಜ್ಯಗಳಿಗೆ ಅಗತ್ಯವಿರುವ ನೆರವು ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕರ್ನಾಟಕದಲ್ಲಿರುವ ಯೋಗಿ ಆದಿತ್ಯನಾಥ್ ಅವರು ತಮ್ಮ ರಾಜ್ಯದ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದು, ಪರಿಹಾರ ಕಾರ್ಯದಲ್ಲಿ ಯಾವುದೇ ಲೋಪವಾದರೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?