
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಮ್ಮೆ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಮಳೆಯು ಹಲವಾರು ಕಡೆ ಅನಾಹುತಗಳಿಗೆ ಕಾರಣವಾಗಿದೆ.
ಚಂದ್ರಾಲೇಔಟ್ನಲ್ಲಿ ಹಾಸ್ಟೆಲ್ ಗೋಡೆ ಕುಸಿದು 6 ಕಾರು, 2 ಆಟೋ, 8 ಬೈಕ್ಗಳು ಜಖಂಗೊಂಡಿದೆ. ಸ್ಥಳಕ್ಕೆ ಕಾರ್ಪೊರೇಟರ್ ರಾಜು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಜೆಪಿ ನಗರದ ಐದನೇ ಬ್ಲಾಕ್ನಲ್ಲಿ ಮನೆ ಮೇಲೆಯೇ ಅಪಾರ್ಟ್ಮೆಂಟ್ ಗೋಡೆಯೊಂದು ಕುಸಿದ ಘಟನೆ ನಡೆದಿದೆ. ಶೋಭಾ ಡಿಪ್ಲೋರ್ ಅಪಾರ್ಟ್ಮೆಂಟ್ ಗೋಡೆಯು ಮನೆ ಬಾಗಿಲ ಮೇಲೆ ಕುಸಿದಿದ್ದು, ಕುಟುಂಬದ ನಾಲ್ಕು ಸದಸ್ಯರು ಮನೆಯೊಳಗೇ ಬಂಧಿಯಾಗಿದ್ದಾರೆ.
ಜೆಪಿ ನಗರದ 2ನೇ ಬ್ಲಾಕ್, ಕೋರಮಂಗಲ, ನಾಯಂಡಹಳ್ಳಿಗಳಲ್ಲಿ ಕೂಡಾ ಮನೆಗಳಿಗೆ ನೀರು ನುಗ್ಗಿದೆ. (ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.