ಇಂದಿನಿಂದ 3 ದಿನ ಈ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ

Published : Sep 17, 2018, 09:15 AM ISTUpdated : Sep 19, 2018, 09:27 AM IST
ಇಂದಿನಿಂದ 3 ದಿನ ಈ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ

ಸಾರಾಂಶ

ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಗಾಳಿ ಸಹಿತ ಮಳೆಯಾಗಲಿದೆ ಎಂದು ನೈಸರ್ಗಿಕ ಪ್ರಕೋಪ ಕೇಂದ್ರ ತಿಳಿಸಿದೆ.

ಬೆಂಗಳೂರು: ಆಂಧ್ರಪ್ರದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರದಿಂದ ಮೂರ್ನಾಲ್ಕು ದಿನ ಗಾಳಿ ಸಹಿತ ಮಳೆಯಾಗಲಿದೆ ಎಂದು ನೈಸರ್ಗಿಕ ಪ್ರಕೋಪ ಕೇಂದ್ರ ತಿಳಿಸಿದೆ. ಕಳೆದ ಕೆಲ ದಿನ ಗಳಿಂದ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆ ಯಾಗಿದ್ದರಿಂದ ಉಷ್ಣಾಂಶದಲ್ಲಿ ಏರಿಕೆ ಉಂಟಾಗಿತ್ತು.

ಆದರೆ, ಇದೀಗ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರ ಹಾಗೂ ತೆಲಗಾಣ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. 

ಇದರ ಪರಿಣಾಮ ಉತ್ತರ ಕರ್ನಾಟಕದ ಗದಗ, ಯಾದಗಿರಿ, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೋಮವಾರದಿಂದ ಮೂರ್ನಾಲ್ಕು ದಿನ ಗಾಳಿ ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆಯಾ ಗುವ ಸಂಭವವಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಶ್ರೀನಿವಾಸ್‌ರೆಡ್ಡಿ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಸ್ಕ್‌, ಜೆಫ್‌ ಬೆಬೋಸ್‌, ಅಂಬಾನಿ ಇವರ್ಯಾರೂ ಅಲ್ಲ.. ಇದು ವಿಶ್ವದ ಅತ್ಯಂತ ಶ್ರೀಮಂತ ಕುಟುಂಬ, ಇವರಿಗಿದೆ ಫ್ಲಿಪ್‌ಕಾರ್ಟ್‌ ಲಿಂಕ್‌
ಮಹೇಶ್‌ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಬೆನ್ನಲ್ಲೇ ನಾಪತ್ತೆ! ಮೈಕ್ ಮೂಲಕ ಪ್ರಕಟಣೆ ಹೊರಡಿಸಿದ ಸರ್ಕಾರ!