
ಬೆಂಗಳೂರು : ಕಳೆದೆರಡು ದಿನಗಳಿಂದ ನಗರದ ಕೆಲವಡೆ ತುಂತುರು ಮಳೆಯಾಗುತ್ತಿದ್ದು, ಶುಕ್ರವಾರ ರಾತ್ರಿಯೂ ಕೆಲವಡೆ ಮಳೆ ಆಗಿದೆ.
ಶುಕ್ರವಾರ ಸಂಜೆ 9.30 ರಿಂದ ಆರಂಭವಾದ ಮಳೆ ರಾತ್ರಿ 11ರ ವರೆಗೆ ಸುರಿಯಿತು. ಶಿವಾನಂದ ವೃತ್ತ, ಮೆಜೆಸ್ಟಿಕ್, ಚಾಲುಕ್ಯ ವೃತ್ತ, ಕೆ.ಆರ್. ಮಾರುಕಟ್ಟೆ, ಶಿವಾಜಿನಗರ, ಮಲ್ಲೇಶ್ವರ, ರಾಜಾಜಿನಗರ, ಆನಂದ್ ರಾವ್ ವೃತ್ತ ಸೇರಿದಂತೆ ಹಲವಡೆ ಮಳೆಯಾದ ವರದಿಯಾಗಿದೆ.
ಗುರುವಾರ ತಡ ರಾತ್ರಿಯೂ ಮಹಾಲಕ್ಷ್ಮೀ ಲೇಔಟ್, ನಂದಿನಿ ಲೇಔಟ್, ವಿಧಾನಸೌಧ, ಶಿವಾಜಿನಗರ, ಕೆ.ಆರ್.ಸರ್ಕಲ್ ಸೇರಿದಂತೆ ಕೆಲವೆಡೆ ಮಳೆಯಾದ ವರದಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.