ಬಿಸಿಲನಾಡು ಕಲಬುರ್ಗಿಯಲ್ಲಿ ಎರಡು ದಿನಗಳಿಂದ ನಿಲ್ಲದ ಮಳೆಯ ಆರ್ಭಟ

Published : Sep 15, 2016, 01:52 PM ISTUpdated : Apr 11, 2018, 12:54 PM IST
ಬಿಸಿಲನಾಡು ಕಲಬುರ್ಗಿಯಲ್ಲಿ ಎರಡು ದಿನಗಳಿಂದ ನಿಲ್ಲದ ಮಳೆಯ ಆರ್ಭಟ

ಸಾರಾಂಶ

ಬಿಸಿಲುನಾಡು ಕಲಬುರಗಿ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಜೋರಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಸೇತುವೆಗಳು ಮುಳುಗಡೆಯಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ.

ಕಲಬುರ್ಗಿ(ಸೆ. 15): ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಮಳೆಯ ಆರ್ಭಟ ಜೋರಾಗಿದೆ. ಹಲವು ಸೇತುವೆಗಳು ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.  ಸೇಡಂ ತಾಲೂಕಿನ ಮಳಖೇಡ್ ಸೇತುವೆ ಜಲಾವೃತವಾಗಿದೆ. ಕಾಗಿಣಾ ನದಿಗೆ ಅಡ್ಡಲಾಗಿ ಕಟ್ಚಿರುವ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ಸೇಡಂ-ಕಲಬುರಗಿ ರಸ್ತೆ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಚಿತ್ತಾಪುರ ತಾಲೂಕಿನ ದಂಡೋತಿ ರಸ್ತೆ ಕೂಡ ಮುಳುಗಡೆಯಾಗಿದ್ದು, ಸಂಪರ್ಕ ಕಡಿತಗೊಂಡಿದೆ. ಪರ್ಯಾಯ ಮಾರ್ಗವಾಗಿ ಸಂಚರಿಸುವಂತೆ ಪ್ರಯಾಣಿಕರಿಗೆ ಸಲಹೆ ನೀಡಲಾಗುತ್ತಿದೆ. ಇನ್ನು, ಚಿಂಚೋಳಿ ತಾಲೂಕಿನ ತಾಜಲಾಪುರ ಸೇತುವೆ ಕೂಡಾ ಮಳೆನೀರಿನಿಂದ ಜಲಾವೃತವಾಗಿದೆ. ಮುಲ್ಲಾಮಾರಿ ನದಿಗೆ ಕಟ್ಟಲಾಗಿರುವ ಸೇತುವೆ ಜಲಾವೃತಗೊಂಡು ತಾಜಲಾಪುರ, ಚಿಮ್ಮನಚೋಡ್, ಸಲಗರ ಬಸಂಪೂರ, ಹಸರಗುಂಡಗಿ ಗ್ರಾಮಗಳ ರಸ್ತೆ ಸಂಚಾರ ಕಡಿತಗೊಂಡಿದೆ.

ವರದಿ: ಶರಣಯ್ಯ ಹಿರೇಮಠ, ಸುವರ್ಣನ್ಯೂಸ್​

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ