
ಮುಂಬೈ: ಮೋದಿ ಮುಕ್ತ ಭಾರತ ನಿರ್ಮಾಣಕ್ಕೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖಂಡ ರಾಜ್ ಠಾಕ್ರೆ ಕರೆ ನೀಡಿದ್ದಾರೆ.
ಗುಡಿ ಪಾಡ್ವಾ ನಿಮಿತ್ತ ಮುಂಬೈಯ ಶಿವಾಜಿ ಪಾರ್ಕ್’ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಜ್ ಠಾಕ್ರೆ, ನಾವಿಂದು ಮೂರನೇ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸಿದ್ಧರಾಗಬೇಕಾಗಿದೆ. ಮೋದಿ-ಮುಕ್ತ ಭಾರತವನ್ನು ನಿರ್ಮಿಸಲು ಎಲ್ಲಾ ರಾಜಕೀಯ ಪಕ್ಷಗಳು ಒಂದಾಗಬೇಕೆಂದು, ಕರೆ ನೀಡಿದ್ದಾರೆ.
ಸುಮಾರು ಒಂದು ಗಂಟೆ ಮಾತನಾಡಿದ ಠಾಕ್ರೆ, ಕೆಲವರು ಮುಂದಿನ ದಿನಗಳಲ್ಲಿ ದೇಶಾದ್ಯಂತ ಗಲಭೆ ನಡೆಸುವ ಪ್ರಯತ್ನದಲ್ಲಿದ್ದಾರೆ ಎಂದು ಕೂಡಾ ಈ ಸಂದರ್ಭದಲ್ಲಿ ಎಚ್ಚರಿಸಿದ್ದಾರೆ.
ಉತ್ತರ ಪ್ರದೇಶದ ಪ್ರಮುಖ 2 ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿಯು ಸೋಲುಂಡ ಬಳಿಕ ಪ್ರತಿಪಕ್ಷಗಳ ಪೈಕಿ ಮೈತ್ರಿಯ ಬಗ್ಗೆ ಚರ್ಚೆಗಳು ಗರಿಗೆದರಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.