ಸೋನಿಯಾ ಭೇಟಿ ಮಾಡಿದ ರಾಜ್: ಆಯೋಗಕ್ಕೆ ಹಾಕಿದರು ಆವಾಜ್?

Published : Jul 08, 2019, 08:32 PM ISTUpdated : Jul 08, 2019, 08:42 PM IST
ಸೋನಿಯಾ ಭೇಟಿ ಮಾಡಿದ ರಾಜ್: ಆಯೋಗಕ್ಕೆ ಹಾಕಿದರು ಆವಾಜ್?

ಸಾರಾಂಶ

ಕುತೂಹಲ ಮೂಡಿಸಿದ ಸೋನಿಯಾ-ರಾಜ್ ಠಾಕ್ರೆ ಭೇಟಿ|14 ವರ್ಷಗಳ ಬಳಿಕ ನವದೆಹಲಿಗೆ ಬಂದಿಳಿದಿರುವ ರಾಜ್ ಠಾಕ್ರೆ| ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಸೋನಿಯಾ ಜೊತೆ ಚರ್ಚೆ| ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಭೇಟಿ ಮಾಡಿದ ರಾಜ್ ಠಾಕ್ರೆ| ಇವಿಎಂ ಮತಯಂತ್ರ ಅನುಮಾನ ಬಗೆಹರಿಸುವಂತೆ ಆಗ್ರಹಿಸಿದ MNS ಮುಖ್ಯಸ್ಥ|

ನವದೆಹಲಿ(ಜು.08): ಬರೋಬ್ಬರಿ 14 ವರ್ಷಗಳ ಬಳಿಕ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡಿರುವ MNS ಮುಖ್ಯಸ್ಥ ರಾಜ್ ಠಾಕ್ರೆ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.

ನವದೆಹಲಿಯಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ರಾಜ್ ಠಾಕ್ರೆ, ಸೋನಿಯಾ ಅವರಿಗೆ ಹೂಗುಚ್ಛ ನೀಡುವ ಮೂಲಕ ಸನ್ಮಾನಿಸಿದರು.

ಇವಿಎಂ ಯಂತ್ರಗಳ ದುರ್ಬಳಕೆ ಕುರಿತು ಇಬ್ಬರೂ ನಾಯಕರು ಚರ್ಚೆ ಮಾಡಿದ್ದಾರೆ ಎನ್ನಲಾಗಿದ್ದು, ದೇಶದ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ದೀರ್ಘ ಸಮಾಲೋಚನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮೊದಲು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅವರನ್ನು ಭೇಟಿ ಮಾಡಿದ್ದ ರಾಜ್ ಠಾಕ್ರೆ, ಇವಿಎಂ ಮತಯಂತ್ರಗಳ ಮೇಲಿರುವ ಅನುಮಾನವನ್ನು ಬಗೆಹರಿಸುವಂತೆ ಆಗ್ರಹಿಸಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಸಕರಿಗೆ ಡಿ.ಕೆ.ಶಿವಕುಮಾರ್‌ ಔತಣಕೂಟ; 25ಕ್ಕೂ ಹೆಚ್ಚು ಶಾಸಕರು ಭಾಗಿ
ಸುತ್ತೋಲೆ ವಿವಾದಕ್ಕೆ ತೆರೆ.. ಹಾಲಿ ಪಿಯುಸಿ ಉಪನ್ಯಾಸಕರಿಗೆ ಇಲ್ಲ ಹಿಂಬಡ್ತಿ: ಸಚಿವ ಮಧು ಬಂಗಾರಪ್ಪ