
ನವದೆಹಲಿ (ನ.19): ಹಣದ ಅಪಮೌಲ್ಯೀಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ದ್ವಿಮುಖ ನೀತಿ ತಾಳಿದ್ದಾರೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಆರೋಪಿಸಿದ್ದಾರೆ.
ಹಣದ ಅಪಮೌಲ್ಯೀಕರಣದಿಂದ ಕಪ್ಪುಹಣ ಹೊರ ಬರುತ್ತದೆ ಎಂದು ಮೋದಿ ಘೋಷಿಸಿದ್ದರು. ಆದರೆ ಬಿಜೆಪಿಯ ಜನಾರ್ಧನ ರೆಡ್ಡಿ ತಮ್ಮ ಮಗಳ ಮದುವೆಗೆ 500 ಕೋಟಿಯನ್ನು ಖಾಲಿ ಮಾಡಿದ್ದಾರೆ. ಇದು ಹೇಗೆ ಸಾಧ್ಯವಾಯಿತು ಎಂದು ಠಾಕ್ರೆ ಪ್ರಶ್ನಿಸಿದ್ದಾರೆ.
ನೋಟು ನಿಷೇಧದಿಂದ ಜನರು ದಂಗೆಯೇಳುವ ಸ್ಥಿತಿಯಲ್ಲಿದ್ದಾರೆ. ಇದಕ್ಕೆ ಸುಪ್ರೀಂಕೋರ್ಟ್ ಕೂಡಾ ಕಳವಳ ವ್ಯಕ್ತಪಡಿಸಿದೆ. ನಾನು ಕೂಡ ಈ ಅಭಿಪ್ರಾಯವನ್ನು ಬೆಂಬಲಿಸುತ್ತೇನೆ. 500 ಹಾಗೂ 1000 ರೂ ನಿಷೇಧದಿಂದ ನಾವು ಇಪ್ಪತ್ತೈದು ವರ್ಷ ಹಿಂದಕ್ಕೆ ಸರಿಯಲಿದ್ದೇವೆ ಎಂದು ರಾಜ್ ಠಾಕ್ರೆ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.