ಬೆಂಗಳೂರಿನಲ್ಲಿ ನಮ್ಮ ಕಾಡಹಬ್ಬ, ವಿಶೇಷ ಏನು?

Published : Jul 10, 2018, 04:13 PM ISTUpdated : Jul 10, 2018, 04:15 PM IST
ಬೆಂಗಳೂರಿನಲ್ಲಿ ನಮ್ಮ ಕಾಡಹಬ್ಬ, ವಿಶೇಷ ಏನು?

ಸಾರಾಂಶ

ಪ್ರತಿ ದಿನ ಪರಿಸರ ಸಂರಕ್ಷಣೆಯ ಕೂಗು ಕೇಳಿ ಬರುತ್ತಲೇ ಇರುತ್ತದೆ. ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆ ಇಟ್ಟಿರುವ ರಾಜರಾಜೇಶ್ವರಿ ನಗರದ ಐ ಕೇರ್ ಸಂಸ್ಥೆ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ.ಏನಿದು ಹೊಸತನ ಈ ಸುದ್ದಿಯನ್ನು  ಓದಿ...

ಬೆಂಗಳೂರು[ಜು.10] 'ಆರ್ ಆರ್ ನಗರ- ಐ - ಕೇರ್' ಸಂಸ್ಥೆಯು ಜುಲೈ 15 ರಂದು ಬೆಳಗ್ಗೆ 7 ರಿಂದ  10 ರವರೆಗೆ, ​​'ನಮ್ಮ ಕಾಡಹಬ್ಬ'  ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ರಾಜರಾಜೇಶ್ವರಿ ನಗರದಲ್ಲಿರುವ ಸಂಸ್ಥೆ 2013 ರಿಂದ, 'ಹಸಿರು ಮತ್ತು ಸ್ವಚ್ಛ ಆರ್ ಆರ್ ನಗರ' ನಿರ್ಮಿಸುವ ಉದ್ದೇಶದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ.

ಕಾಡು ಹಬ್ಬದ ಪ್ರಯುಕ್ತ ನಗರದ ಹೊರವಲಯದಲ್ಲಿರುವ ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಒಂದು ಸಾವಿರ  ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಈ ಕೆಲಸಕ್ಕೆ  ವೃತ್ತಿಪರರು, ತಜ್ಞರು, ನಾಗರಿಕರು, ವರ್ತಕರು, ವ್ಯಾಪಾರಿಗಳು, ಉದ್ಯಮಿಗಳು, ವಿದ್ಯಾರ್ಥಿಗಳು, ಸ್ಥಳೀಯ ನಿವಾಸಿಗಳು, ಶಿಕ್ಷಣ ಸಂಸ್ಥೆಗಳು ಸೇರಿದಂತೆ, ನಾನಾ ಕ್ಷೇತ್ರದ ಸಂಘ-ಸಂಸ್ಥೆಗಳನ್ನು ಪಾಲುದಾರರಾಗಿ ಭಾಗವಹಿಸಲಿದ್ದಾರೆ.

ಸಸಿಗಳನ್ನು ಅರಣ್ಯ ಇಲಾಖೆ ಒದಗಿಸಲಿದೆ.  ಲಿಯೊ ಪ್ಯಾಕರ್ಸ್ ಅಂಡ್ ಮೂವೆರ್ಸ್ , ಬಾಲಾಜಿ ಕನ್ ಸ್ಟ್ರಕ್ಷನ್  ಹಾಗೂ ಬೆಸ್ಟ್ ಕ್ಲಬ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು  ಸಸಿ ನೆಡುವ ಕೆಲಸಕ್ಕೆ ಕೖ ಜೋಡಿಸಲಿವೆ. ಬಿಜಿಎಸ್ ಗ್ಲೋಬಲ್ ಆಸ್ಪತ್ರೆ ವೈದ್ಯಕೀಯ ನೆರವು ನೀಡುತ್ತಿದೆ. 

ಪರಿಸರ ಕಾಳಜಿಗೆ ಸ್ಟ್ಯಾಂಡರ್ಡ್ ಚಾರ್ಟರ್ಡ್, ಆರೆಕಲ್ ಸೇರಿದಂತೆ ಕಾರ್ಪೊರೇಟ್ ವಲಯದ ಹಲವು ಕಂಪನಿಗಳು ಮತ್ತು ಸ್ವಯಂ ಸೇವಾ ಕಾರ್ಯಕರ್ತರು ಕೈಜೋಡಿಸಿದ್ದಾರೆ.  ಅರಣ್ಯದಲ್ಲಿ ಮರಗಳನ್ನು ಬೆಳೆಸುವ ಈ ಕಾರ್ಯಕ್ರಮಕ್ಕೆ ನಾಟಿ ಸಸಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಇಂಟರ್ ನ್ಯಾಶನಲ್ ಆರ್ಟ್ ಆ್ಯಂಡ್ ಕಲ್ಚರಲ್ ಫೌಂಡೇಶನ್ ಅಧ್ಯಕ್ಷ ಶ್ರೀವತ್ಸ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೆವಿಲ್ ಇನ್ ಟ್ರಬಲ್: ನಟ ದರ್ಶನ್‌ನಿಂದ ಒಂದು ಗನ್ ಕಿತ್ತುಕೊಂಡರೂ ಮತ್ತೊಂದು .22mm ರೈಫಲ್ ಮರೆತ ಪೊಲೀಸರು
Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!