ಚುನಾವಣೆ ಹೊಸ್ತಿಲಲ್ಲೇ ಬಿಗ್ ಶಾಕ್ : ಕಾಂಗ್ರೆಸ್ ಸೇರಿದ ಬಿಜೆಪಿಗರು

Published : Oct 26, 2018, 10:54 AM IST
ಚುನಾವಣೆ ಹೊಸ್ತಿಲಲ್ಲೇ ಬಿಗ್ ಶಾಕ್ : ಕಾಂಗ್ರೆಸ್ ಸೇರಿದ ಬಿಜೆಪಿಗರು

ಸಾರಾಂಶ

ಚುನಾವಣೆ ಹೊಸ್ತಿಲಲ್ಲೇ ಬಿಜೆಪಿಗೆ ಬಿಗ್ ಶಾಕ್ ಒಂದು ಎದುರಾಗಿದೆ. ಬಿಜೆಪಿ ಮುಖಂಡರನೇಕರು ಪಕ್ಷವನ್ನು ತೊರೆದು ಕಾಂಗ್ರೆಸ್ ಸೇರಿದ್ದಾರೆ. 

ಜೈಪುರ :  ರಾಜಸ್ಥಾನದಲ್ಲಿ ಇನ್ನೇನು ಚುನಾವಣೆ ಸಮೀಪಿಸುತ್ತಿದ್ದು ಇದೇ ವೇಳೆ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.  ರಾಹುಲ್ ಗಾಂಧಿ ಸಿಕರ್ ನಲ್ಲಿ ರ್ಯಾಲಿ ನಡೆಸಿದ ಬೆನ್ನಲ್ಲೇ ಬಿಜೆಪಿಯಲ್ಲಿದ್ದ ಕೆಲ ಜಾಟ್ ಮುಖಂಡರು ಇದೀಗ ಕಾಂಗ್ರೆಸಿನತ್ತ ಮುಖ ಮಾಡಿದ್ದಾರೆ. 

ಬಿಜೆಪಿ ಮಾಜಿ  ಶಾಸಕ ನಾರಾಯಣ ಬೀಡ, ಮಾಜಿ ಶಾಸಕಿ ಉಷಾ ಪುನಿಯಾ ಹಾಗೂ ವಿಜಯ್ ಪುನಿಯಾ, ಮೂಲ್ ಚಂದ್ ಮೀನಾ, ಬಿಂದು ಚೌಧರಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇನ್ನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದ ಶಾಸಕ ರಾಜ್ ಕುಮಾರ್ ಶರ್ಮಾ ಅವರು ಇದೀಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. 

ಶೇಕಾವತಿ ಪ್ರದೇಶದಲ್ಲಿ ಹೆಚ್ಚು ಪ್ರಭಾವಶಾಲಿಯಾಗಿ ಜಾಟ್ ಸಮುದಾಯವಿದ್ದು, ಇದೀಗ ಜಾಟ್ ಮುಖಂಡರ ಕಾಂಗ್ರೆಸ್ ಸೇರ್ಪಡೆಯಿಂದ  ಹೆಚ್ಚಿನ ಬಲ ಬಂದಂತಾಗಿದೆ. 

ಇನ್ನು ರಾಜ್ ಕುಮಾರ್ ಶರ್ಮಾ ಹಾಗೂ ಬಿಂದು ಚೌಧರಿ ಅವರು ಮೂಲತಃ ಕಾಂಗ್ರೆಸಿಗರಾಗಿದ್ದು 2008ರಲ್ಲಿ ರಾಜ್ ಕುಮಾರ್ ಶರ್ಮ ಬಿಎಸ್ ಪಿ ಸೇರ್ಪಡೆಯಾಗಿದ್ದರು.  ಅಶೋಕ್ ಗೆಹ್ಲೋಟ್ ಸರ್ಕಾರದಲ್ಲಿ ಮಂತ್ರಿಗಿರಿಯನ್ನು ಪಡೆದುಕೊಂಡಿದ್ದರು. 

ಇದೇ ವೇಳೆ ಬಿಂದು ಚೌಧರಿ ಬಿಜೆಪಿ ಸೇರಿದ್ದರು. ಆದರೆ ಇದೀಗ ಇವರೆಲ್ಲರೂ ಕೂಡ ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಚುನಾವಣೆಗೆ ವೇಳೆಯೇ ಶಾಕ್ ನೀಡಿದಂತಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಾಣಕ್ಯ ಬದುಕಿದ್ದಿದ್ದರೆ ನಿಮ್ಮ ರಾಜಕೀಯ ಚತುರತೆ ಕಂಡು ಬೆಚ್ಚಿಬೀಳುತ್ತಿದ್ದ: ಪ್ರಿಯಾಂಕಾ ವಾದ್ರಾ ಮಾತಿಗೆ ನಕ್ಕ ಅಮಿತ್‌ ಶಾ
ಇರುವೆಗಳನ್ನು ಕದ್ದು ಸಿಕ್ಕಿಬಿದ್ದ ಕಳ್ಳ; ಪ್ರತಿ ಇರುವೆಗೆ ₹290ರಂತೆ ₹6.4 ಲಕ್ಷ ದಂಡ, ಜೈಲು ಶಿಕ್ಷೆ ವಿಧಿಸಿದ ಕೋರ್ಟ್